ಬೆಂಗಳೂರು : ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ.
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದರು. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ.
ಪೊಲೀಸ್ ಇಲಾಖೆಯಲ್ಲಿ ಶೇ3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದರು. ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ ಪಟುಗಳಿಗೆ ಉತ್ತಮ ನಗದು ಬಹುಮಾನವನ್ನೂ ನೀಡುತ್ತಿದೆ ಎಂದು ವಿವರಿಸಿದರು. ಸಚಿವರಾದ ರಾಮಲಿಂಗಾರೆಡ್ಡಿ, ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಶಾಸಕರಾದ ರಿಜ್ವಾನ್ ಅರ್ಷದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…