eshwar khandre (1)
ಬೆಂಗಳೂರು : ಪರಿಸರಕ್ಕೆ ಮತ್ತು ಜಲ ಮೂಲಗಳಿಗೆ ಮಾರಕವಾದ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪ ಮತ್ತು ಗೌರಿಯ ಮೂರ್ತಿಗಳ ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಉತ್ತೇಜನ ನೀಡಲು ಕ್ರಮವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಓಪಿ ಗಣೇಶ ವಿಗ್ರಹಗಳನ್ನು ಕ್ಯಾಲ್ಷಿಯಂ, ಸಲ್ಛೇಟ್, ಹೆಮಿಹೈಡ್ರೇಟ್ ಯುಕ್ತ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಮ್ಯಾಗ್ನೀಷಿಯಂ ಸೇರಿದಂತೆ ಅನೇಕ ಅಪಾಯಕಾರಿ ಅಂಶಗಳಿರುತ್ತವೆ. ಇಂತಹ ಮೂರ್ತಿಗಳಿಗೆ ಪಾದರಸ, ಕ್ಯಾಡಿಯಂ, ಸೀಸ ಮತ್ತು ಇಂಗಾಲ ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸಲಾಗುತ್ತದೆ. ಇದನ್ನು ಕೆರೆ, ಬಾವಿ, ನದಿಯಲ್ಲಿ ವಿಸರ್ಜಿಸಿದಾಗ ಭಾರ ಲೋಹ ಕರಗಿ ಜನ ಜಾನುವಾರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳ ಸಾವಿಗೆ ಕಾರಣವಾಗುತ್ತದೆ. ಹೀಗಾಗಿ ಜನ ಜಾಗೃತಿ ಮೂಡಿಸಲು ಪರಿಸರ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ಈ ಹಿಂದೆ ಪಿಓಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು, ಮಾರಾಟ ಮಾಡದಂತೆ ಸುತ್ತೋಲೆ ಹೊರಡಿಸಲಾಗುತ್ತಿತ್ತು. ತಾವು ಸಚಿವರಾದ ಬಳಿಕ ೨೦೨೩ರಲ್ಲಿ ಪಿಓಪಿ ಮೂರ್ತಿ ತಯಾರಿಕೆ, ಮಾರಾಟ ನಿಷೇಧಿಸಿ ಸರ್ಕಾರಿ ಆದೇಶವನ್ನೇ ಹೊರಡಿಸಲಾಗಿದೆ. ಇದನ್ನು ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದರು.
ಗೌರಿ, ಗಣೇಶ ಹಬ್ಬಕ್ಕೆ ಇನ್ನೂ ಒಂದು ತಿಂಗಳಿದ್ದು, ಈಗಿನಿಂದಲೇ ಪಿಓಪಿ ಗೌರಿ, ಗಣಪತಿ ಮೂರ್ತಿಗಳ ಸಾಗಾಟ, ದಾಸ್ತಾನು ಮಾಡದಂತೆ ನಿಯಂತ್ರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…