eshwar khandre (1)
ಬೆಂಗಳೂರು : ಪರಿಸರಕ್ಕೆ ಮತ್ತು ಜಲ ಮೂಲಗಳಿಗೆ ಮಾರಕವಾದ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣಪ ಮತ್ತು ಗೌರಿಯ ಮೂರ್ತಿಗಳ ದಾಸ್ತಾನು, ಸಾಗಾಟ ಮತ್ತು ಮಾರಾಟಕ್ಕೆ ಉತ್ತೇಜನ ನೀಡಲು ಕ್ರಮವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಓಪಿ ಗಣೇಶ ವಿಗ್ರಹಗಳನ್ನು ಕ್ಯಾಲ್ಷಿಯಂ, ಸಲ್ಛೇಟ್, ಹೆಮಿಹೈಡ್ರೇಟ್ ಯುಕ್ತ ಪುಡಿಯಿಂದ ತಯಾರಿಸಲಾಗುತ್ತದೆ. ಇದರಲ್ಲಿ ಗಂಧಕ, ರಂಜಕ, ಜಿಪ್ಸಮ್ ಮತ್ತು ಮ್ಯಾಗ್ನೀಷಿಯಂ ಸೇರಿದಂತೆ ಅನೇಕ ಅಪಾಯಕಾರಿ ಅಂಶಗಳಿರುತ್ತವೆ. ಇಂತಹ ಮೂರ್ತಿಗಳಿಗೆ ಪಾದರಸ, ಕ್ಯಾಡಿಯಂ, ಸೀಸ ಮತ್ತು ಇಂಗಾಲ ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸಲಾಗುತ್ತದೆ. ಇದನ್ನು ಕೆರೆ, ಬಾವಿ, ನದಿಯಲ್ಲಿ ವಿಸರ್ಜಿಸಿದಾಗ ಭಾರ ಲೋಹ ಕರಗಿ ಜನ ಜಾನುವಾರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜಲಚರಗಳ ಸಾವಿಗೆ ಕಾರಣವಾಗುತ್ತದೆ. ಹೀಗಾಗಿ ಜನ ಜಾಗೃತಿ ಮೂಡಿಸಲು ಪರಿಸರ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ಈ ಹಿಂದೆ ಪಿಓಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು, ಮಾರಾಟ ಮಾಡದಂತೆ ಸುತ್ತೋಲೆ ಹೊರಡಿಸಲಾಗುತ್ತಿತ್ತು. ತಾವು ಸಚಿವರಾದ ಬಳಿಕ ೨೦೨೩ರಲ್ಲಿ ಪಿಓಪಿ ಮೂರ್ತಿ ತಯಾರಿಕೆ, ಮಾರಾಟ ನಿಷೇಧಿಸಿ ಸರ್ಕಾರಿ ಆದೇಶವನ್ನೇ ಹೊರಡಿಸಲಾಗಿದೆ. ಇದನ್ನು ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದರು.
ಗೌರಿ, ಗಣೇಶ ಹಬ್ಬಕ್ಕೆ ಇನ್ನೂ ಒಂದು ತಿಂಗಳಿದ್ದು, ಈಗಿನಿಂದಲೇ ಪಿಓಪಿ ಗೌರಿ, ಗಣಪತಿ ಮೂರ್ತಿಗಳ ಸಾಗಾಟ, ದಾಸ್ತಾನು ಮಾಡದಂತೆ ನಿಯಂತ್ರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…