ರಾಜ್ಯ

ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ: ಈಶ್ವರ ಖಂಡ್ರೆ

ಬೆಂಗಳೂರು: ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟಡದಲ್ಲಿ ಅಳವಡಿಸಲಾಗಿರುವ ಸ್ವಯಂ ಚಾಲಿತ ಬಟ್ಟೆಯ ಕೈಚೀಲ ವಿತರಣಾ ಯಂತ್ರಕ್ಕೆ ಶುಕ್ರವಾರ (ಆ.23) ಚಾಲನೆ ನೀಡಿ ಮಾತನಾಡಿದ ಅವರು, ಏಕ ಬಳಕೆ ಪ್ಲಾಸ್ಟಿಕ್ ನಿಂದ ಪರಿಸರಕ್ಕೆ ತೀವ್ರ ಹಾನಿ ಆಗುತ್ತಿದ್ದು, ಇದಕ್ಕೆ ಪರ್ಯಾಯವಾದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವಂತೆ ತಿಳಿಸಿದರು.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ಜಗತ್ತಿಗೇ ಸವಾಲಾಗಿದ್ದು, ಈ ಸಂದರ್ಭದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಕೈಗೊಳ್ಳುವ ಸಣ್ಣ ಪರಿಹಾರಗಳೂ ದೀರ್ಘ ಕಾಲದಲ್ಲಿ ದೊಡ್ಡ ಪರಿಣಾಮ ಬೀರುತ್ತವೆ ಎಂದರು.

ಮಾಲಿನ್ಯ ನಿಯಂತ್ರಣಕ್ಕೆ ಸಾಂಪ್ರಧಾಯಿಕ ವಿಧಾನಗಳ ಜೊತೆಗೆ ನಾವೀನ್ಯಪೂರ್ಣ ಮತ್ತು ಆಧುನಿಕ ತಂತ್ರಜ್ಞಾನ ಆಧಾರಿತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಸಂಶೋಧನೆಗೂ ಉತ್ತೇಜನ ನೀಡಬೇಕು ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.

ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬಾಟಲಿ, ಚಮಚ, ತಟ್ಟೆ, ಲೋಟ ಇವೆಲ್ಲವೂ ಪರಿಸರಕ್ಕೆ ಶತ್ರುಗಳಾಗಿದ್ದು ಇದಕ್ಕೆ ಪರ್ಯಾಯವಾಗಿ ಜೈವಿಕ ವಿಘಟನೀಯ ವಸ್ತುಗಳ ಬಳಕೆಗೆ ಶೀಘ್ರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜೈವಿಕವಾಗಿ ವಿಘಟನೆಯಾಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ ನಗರಾಭಿವೃದ್ಧಿ ಇಲಾಖೆಗೆ ಕಳಿಸಿರುವ ಪ್ರಸ್ತಾವನೆಯ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಶರಣು ಮೋದಿ, ಮರಿಸ್ವಾಮಿ ಗೌಡ ಮತ್ತು ಡಾ. ಪ್ರದೀಪ್, ಮಂಡಳಿಯ ಅಧ್ಯಕ್ಷ (ಉಸ್ತುವಾರಿ) ವಿಜಯ ಮೋಹನ ರಾಜ್, ಸದಸ್ಯ ಕಾರ್ಯದರ್ಶಿ ಬಾಲಚಂದ್ರ ಮೊದಲಾದವರು ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಜೈಲೇ ಮೊದಲ ಪಾಠ ಶಾಲೆ! ಕೊಲೆ ಆರೋಪಿಯೇ ಪ್ರಥಮ ಗುರು!

ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…

8 mins ago

ನಾಳೆ ಶ್ರೀ ಅಯ್ಯಪ್ಪ ಕ್ಷೇತ್ರದ ಮುಖಮಂಟಪ ಲೋಕಾರ್ಪಣೆ

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…

3 hours ago

‘ದೇಸಿ ಬೀಜಗಳನ್ನು ಉಳಿಸಿದರೆ ವಿಷಮುಕ್ತ ಆಹಾರ ನೀಡಲು ಸಾಧ್ಯ’

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…

3 hours ago

ಕ್ರಿಸ್‌ಮಸ್ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…

3 hours ago

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

3 hours ago