ರಾಜ್ಯ

ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ: ಈಶ್ವರ ಖಂಡ್ರೆ

ಬೆಂಗಳೂರು: ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟಡದಲ್ಲಿ ಅಳವಡಿಸಲಾಗಿರುವ ಸ್ವಯಂ ಚಾಲಿತ ಬಟ್ಟೆಯ ಕೈಚೀಲ ವಿತರಣಾ ಯಂತ್ರಕ್ಕೆ ಶುಕ್ರವಾರ (ಆ.23) ಚಾಲನೆ ನೀಡಿ ಮಾತನಾಡಿದ ಅವರು, ಏಕ ಬಳಕೆ ಪ್ಲಾಸ್ಟಿಕ್ ನಿಂದ ಪರಿಸರಕ್ಕೆ ತೀವ್ರ ಹಾನಿ ಆಗುತ್ತಿದ್ದು, ಇದಕ್ಕೆ ಪರ್ಯಾಯವಾದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವಂತೆ ತಿಳಿಸಿದರು.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ಜಗತ್ತಿಗೇ ಸವಾಲಾಗಿದ್ದು, ಈ ಸಂದರ್ಭದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಕೈಗೊಳ್ಳುವ ಸಣ್ಣ ಪರಿಹಾರಗಳೂ ದೀರ್ಘ ಕಾಲದಲ್ಲಿ ದೊಡ್ಡ ಪರಿಣಾಮ ಬೀರುತ್ತವೆ ಎಂದರು.

ಮಾಲಿನ್ಯ ನಿಯಂತ್ರಣಕ್ಕೆ ಸಾಂಪ್ರಧಾಯಿಕ ವಿಧಾನಗಳ ಜೊತೆಗೆ ನಾವೀನ್ಯಪೂರ್ಣ ಮತ್ತು ಆಧುನಿಕ ತಂತ್ರಜ್ಞಾನ ಆಧಾರಿತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಸಂಶೋಧನೆಗೂ ಉತ್ತೇಜನ ನೀಡಬೇಕು ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.

ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬಾಟಲಿ, ಚಮಚ, ತಟ್ಟೆ, ಲೋಟ ಇವೆಲ್ಲವೂ ಪರಿಸರಕ್ಕೆ ಶತ್ರುಗಳಾಗಿದ್ದು ಇದಕ್ಕೆ ಪರ್ಯಾಯವಾಗಿ ಜೈವಿಕ ವಿಘಟನೀಯ ವಸ್ತುಗಳ ಬಳಕೆಗೆ ಶೀಘ್ರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜೈವಿಕವಾಗಿ ವಿಘಟನೆಯಾಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ ನಗರಾಭಿವೃದ್ಧಿ ಇಲಾಖೆಗೆ ಕಳಿಸಿರುವ ಪ್ರಸ್ತಾವನೆಯ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಶರಣು ಮೋದಿ, ಮರಿಸ್ವಾಮಿ ಗೌಡ ಮತ್ತು ಡಾ. ಪ್ರದೀಪ್, ಮಂಡಳಿಯ ಅಧ್ಯಕ್ಷ (ಉಸ್ತುವಾರಿ) ವಿಜಯ ಮೋಹನ ರಾಜ್, ಸದಸ್ಯ ಕಾರ್ಯದರ್ಶಿ ಬಾಲಚಂದ್ರ ಮೊದಲಾದವರು ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago