ರಾಜ್ಯ

ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ: ಈಶ್ವರ ಖಂಡ್ರೆ

ಬೆಂಗಳೂರು: ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟಡದಲ್ಲಿ ಅಳವಡಿಸಲಾಗಿರುವ ಸ್ವಯಂ ಚಾಲಿತ ಬಟ್ಟೆಯ ಕೈಚೀಲ ವಿತರಣಾ ಯಂತ್ರಕ್ಕೆ ಶುಕ್ರವಾರ (ಆ.23) ಚಾಲನೆ ನೀಡಿ ಮಾತನಾಡಿದ ಅವರು, ಏಕ ಬಳಕೆ ಪ್ಲಾಸ್ಟಿಕ್ ನಿಂದ ಪರಿಸರಕ್ಕೆ ತೀವ್ರ ಹಾನಿ ಆಗುತ್ತಿದ್ದು, ಇದಕ್ಕೆ ಪರ್ಯಾಯವಾದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವಂತೆ ತಿಳಿಸಿದರು.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ಜಗತ್ತಿಗೇ ಸವಾಲಾಗಿದ್ದು, ಈ ಸಂದರ್ಭದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಕೈಗೊಳ್ಳುವ ಸಣ್ಣ ಪರಿಹಾರಗಳೂ ದೀರ್ಘ ಕಾಲದಲ್ಲಿ ದೊಡ್ಡ ಪರಿಣಾಮ ಬೀರುತ್ತವೆ ಎಂದರು.

ಮಾಲಿನ್ಯ ನಿಯಂತ್ರಣಕ್ಕೆ ಸಾಂಪ್ರಧಾಯಿಕ ವಿಧಾನಗಳ ಜೊತೆಗೆ ನಾವೀನ್ಯಪೂರ್ಣ ಮತ್ತು ಆಧುನಿಕ ತಂತ್ರಜ್ಞಾನ ಆಧಾರಿತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಸಂಶೋಧನೆಗೂ ಉತ್ತೇಜನ ನೀಡಬೇಕು ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.

ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬಾಟಲಿ, ಚಮಚ, ತಟ್ಟೆ, ಲೋಟ ಇವೆಲ್ಲವೂ ಪರಿಸರಕ್ಕೆ ಶತ್ರುಗಳಾಗಿದ್ದು ಇದಕ್ಕೆ ಪರ್ಯಾಯವಾಗಿ ಜೈವಿಕ ವಿಘಟನೀಯ ವಸ್ತುಗಳ ಬಳಕೆಗೆ ಶೀಘ್ರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜೈವಿಕವಾಗಿ ವಿಘಟನೆಯಾಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್ ಆಸಿಡ್ ಪೋಲಿಮರ್ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ ನಗರಾಭಿವೃದ್ಧಿ ಇಲಾಖೆಗೆ ಕಳಿಸಿರುವ ಪ್ರಸ್ತಾವನೆಯ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಶರಣು ಮೋದಿ, ಮರಿಸ್ವಾಮಿ ಗೌಡ ಮತ್ತು ಡಾ. ಪ್ರದೀಪ್, ಮಂಡಳಿಯ ಅಧ್ಯಕ್ಷ (ಉಸ್ತುವಾರಿ) ವಿಜಯ ಮೋಹನ ರಾಜ್, ಸದಸ್ಯ ಕಾರ್ಯದರ್ಶಿ ಬಾಲಚಂದ್ರ ಮೊದಲಾದವರು ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

5 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

5 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

5 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

5 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

5 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

5 hours ago