ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಅವರ ಮೈಸೂರು ನಿವಾಸದ ವಾಸ್ತವ್ಯ ನಿನ್ನೆಗೆ ಕೊನೆಗೊಂಡಿದ್ದು, ಅನುಮತಿ ವಿಸ್ತರಣೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ನಟ ದರ್ಶನ್ಗೆ ಹೈಕೋರ್ಟ್ನ ಏಕ ಸದಸ್ಯ ಪೀಠವೂ ಎರಡು ವಾರಗಳ ಕಾಲ ಮೈಸೂರಿನ ನಿವಾಸದಲ್ಲಿ ವಾಸ್ತವ್ಯದಲ್ಲಿರಲು ಕಾಲಾವಕಾಶ ನೀಡಿತ್ತು. ಆದರೆ ಈ ಕಾಲಾವಕಾಶ ಭಾನುವಾರ(ಜನವರಿ.5) ದಿನದಂದೇ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಾಸ್ತವ್ಯ ಮುಂದುವರಿಕೆಗೆ ಅನುಮತಿ ವಿಸ್ತರಣೆ ಮಾಡುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸುವ ವಿಚಾರವಾಗಿ ತಮ್ಮ ವಕೀಲರೊಂದಿಗೆ ಚರ್ಚಿಸಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಹೀಗಾಗಿ ಕೆಲ ವಾರಗಳ ಕಾಲ ಮೈಸೂರಿನಲ್ಲಿಯೇ ಉಳಿಯಲು ಅನುಮತಿ ನೀಡುವಂತೆ ದರ್ಶನ್ ಪರ ವಕೀಲರು ಇಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಸಂಕ್ರಾತಿ ನಂತರ ಶಸ್ತ್ರಚಿಕಿತ್ಸೆ ನಿರ್ಧಾರ
ನಟ ದರ್ಶನ್ಗೆ ಕಾಲು ಮತ್ತು ತೀವ್ರ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ಮಾತ್ರ ಬೆನ್ನು ಮತ್ತು ಕಾಲು ನೋವಿನ ಸಮಸ್ಯೆಯಿಂದ ಗುಣಮುಖರಾಗಲು ಸಾಧ್ಯ ಎಂದು ಸಲಹೆ ನೀಡಿದ್ದರು. ಹೀಗಾಗಿ ವೈದ್ಯರ ಸಲಹೆಯಂತೆ ಸಕ್ರಾಂತಿ ನಂತರ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…