ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಅವರ ಮೈಸೂರು ನಿವಾಸದ ವಾಸ್ತವ್ಯ ನಿನ್ನೆಗೆ ಕೊನೆಗೊಂಡಿದ್ದು, ಅನುಮತಿ ವಿಸ್ತರಣೆಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ನಟ ದರ್ಶನ್ಗೆ ಹೈಕೋರ್ಟ್ನ ಏಕ ಸದಸ್ಯ ಪೀಠವೂ ಎರಡು ವಾರಗಳ ಕಾಲ ಮೈಸೂರಿನ ನಿವಾಸದಲ್ಲಿ ವಾಸ್ತವ್ಯದಲ್ಲಿರಲು ಕಾಲಾವಕಾಶ ನೀಡಿತ್ತು. ಆದರೆ ಈ ಕಾಲಾವಕಾಶ ಭಾನುವಾರ(ಜನವರಿ.5) ದಿನದಂದೇ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಾಸ್ತವ್ಯ ಮುಂದುವರಿಕೆಗೆ ಅನುಮತಿ ವಿಸ್ತರಣೆ ಮಾಡುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಸುವ ವಿಚಾರವಾಗಿ ತಮ್ಮ ವಕೀಲರೊಂದಿಗೆ ಚರ್ಚಿಸಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಹೀಗಾಗಿ ಕೆಲ ವಾರಗಳ ಕಾಲ ಮೈಸೂರಿನಲ್ಲಿಯೇ ಉಳಿಯಲು ಅನುಮತಿ ನೀಡುವಂತೆ ದರ್ಶನ್ ಪರ ವಕೀಲರು ಇಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಸಂಕ್ರಾತಿ ನಂತರ ಶಸ್ತ್ರಚಿಕಿತ್ಸೆ ನಿರ್ಧಾರ
ನಟ ದರ್ಶನ್ಗೆ ಕಾಲು ಮತ್ತು ತೀವ್ರ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ಮಾತ್ರ ಬೆನ್ನು ಮತ್ತು ಕಾಲು ನೋವಿನ ಸಮಸ್ಯೆಯಿಂದ ಗುಣಮುಖರಾಗಲು ಸಾಧ್ಯ ಎಂದು ಸಲಹೆ ನೀಡಿದ್ದರು. ಹೀಗಾಗಿ ವೈದ್ಯರ ಸಲಹೆಯಂತೆ ಸಕ್ರಾಂತಿ ನಂತರ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…