ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ಮತ್ತು ಹಳ್ಳಿಗಳಲ್ಲೂ ಇವೆ. ಈಗ ಇವುಗಳಿಗೆ ನಾವು ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶವಿಲ್ಲ. ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿದ್ದೇವೆ. ಅಧಿಕಾರಿಗಳು ಅರ್ಥಮಾಡಿಕೊಂಡು ಅನಧಿಕೃತ ಬಡಾವಣೆಗಳು ತಲೆ ಎತ್ತದಂತೆ ಜಾಗರೂಕರಾಗಿರಬೇಕು ಎಂದು ತಿಳಿಸಿದರು.
ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ. ಪರಿಣಾಮ ಜನರಿಗೆ ನಾಗರೀಕ ಸವಲತ್ತು ಸಿಗುತ್ತಿಲ್ಲ. ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡುತ್ತೇವೆ ಎಂದು ತಿಳಿಸಿದರು.
3 ತಿಂಗಳೊಳಗೆ ಎಲ್ಲರಿಗೂ ಖಾತೆ ನೀಡಿ, ಅನಿಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಿ. ಇಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಿ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ. ಅನಧಿಕೃತ ಬಡಾವಣೆಗಳು ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರಾ ಯೋಜನಾ ಅಧಿಕಾರಿಗಳು ಜವಬ್ದಾರರಾಗುತ್ತೀರಿ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸೂಚಿಸಿದರು.
ನಾನು ಮತ್ತು ಸಂಬಂಧಪಟ್ಟ ಎಲ್ಲಾ ಸಚಿವರು ಈ ಕುರಿತು ಸ್ಪಷ್ಟಪಡಿಸಿದ್ದೇವೆ. ಹೊಸ ಗೊಂದಲಗಳಿಗೆ ಅವಕಾಶ ಮಾಡಿಕೊಡಬೇಡಿ. ಬಿ ಖಾತಾ ಇವತ್ತಿನಿಂದಲೇ ಕೊಡಲು ಶುರುಮಾಡಿ ಎಂದು ಸೂಚಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…