ರಾಜ್ಯ

ವಿರೋಧಿಗಳನ್ನು ಮುಗಿಸಲು ಶತ್ರು ಪೂಜೆ: ಡಿಕೆಶಿಗೆ ಕುಮಾರಸ್ವಾಮಿ ಟಾಂಗ್‌

ಬೆಂಗಳೂರು: ಶತ್ರುಗಳನ್ನು ಮುಗಿಸಿ ಅಧಿಕಾರ ಪಡೆಯಲು ಡಿಕೆ ಶಿವಕುಮಾರ್‌ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ  ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು  ಶತ್ರು ಸಂಹಾರ ಪೂಜೆ ಮಾಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಲ್ಲರನ್ನು ದೇವರೇ ಕಾಪಾಡಬೇಕು. ಅಧಿಕಾರ ಬೇಕು ಅಂತ ದೇವರನ್ನು ಪ್ರಾರ್ಥಿಸುವುದು, ವಿರೋಧಿಗಳ ನಾಶಕ್ಕೆ ಪೂಜೆ ಮಾಡಿಸುವುದು. ಶತ್ರು ನಾಶ ಮಾಡಪ್ಪ ಅಂತ ದೇವರನ್ನು ಬೇಡಿ ಕೋಳ್ಳುವುದು ಅವರ ಚಾಳಿ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಡಿಕೆ ಶಿವಕುಮಾರ್‌ ಅವರ ಶತ್ರು ಸಂಹಾರ ಪೂಜೆಯ ಬಗ್ಗೆ ಮಾತನಾಡಿದ್ದಾರೆ.

ಇನ್ನು ವೈಕೊಂಠ ಏಕಾದಶಿಯ ಶುಭಾಶಯ ತಿಳಿಸಿದ ಕುಮಾರಸ್ವಾಮಿ ಅವರು, ವೈಕುಂಠ ಏಕಾದಶಿಯ ದಿನ ವೈಕುಂಠದ ಬಾಗಿಲು ತೆರೆದಿರುತ್ತೆ ಎಂಬ ನಂಬಿಕೆ ಇದೆ. ಈ ವಿಶೇಷ ದಿನದಂದು ವಿಷ್ಣು ದೇಶ ಆಳುವವರಿಗೆ, ರಾಜ್ಯ ಆಳುವವರಿಗೆ ಎಲ್ಲರಗೂ ಒಳ್ಳೆಯ ಬುದ್ದಿ ಕೊಟ್ಟು ಜನತೆಯ ಸಮಸ್ಯೆ ನಿವಾರಿಸುವ ವಾತಾವರಣನಿರ್ಮಾಣ ಮಾಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

19 mins ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

32 mins ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

1 hour ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

2 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

2 hours ago

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…

2 hours ago