ರಾಜ್ಯ

ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ, ಇಂಧನ ದಕ್ಷತೆ ನೀತಿ’ ಗುರಿ ಸಾಧನೆ

ವಾರ್ಷಿಕ ಕ್ರಿಯಾ ವರದಿ, ಇಂಧನ ಉಳಿತಾಯ ವರದಿ ತಯಾರಿಕೆಯ ಸಮಾಲೋಚನೆಗೆ ಎರಡನೇ ಕಾರ್ಯಾಗಾರ

ಬೆಂಗಳೂರು: ಅವಧಿಗೂ ಮೊದಲೇ ‘ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿ 2022-27’ ಅನುಷ್ಠಾನದ ಗುರಿ ಸಾಧಿಸುವ ಮೂಲಕ ಕರ್ನಾಟಕ ಮಹತ್ವದ ಮೈಲಿಗಲ್ಲು ಸಾಧಿಸಿದೆ.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (ಕ್ರೆಡಲ್), ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ) ಹಾಗೂ ವರ್ಲ್ಡ್ ರಿಸೋರ್ಸ್ ಇನ್ಸ್ಟಿಟ್ಯೂಟ್ (ಡಬ್ಲ್ಯೂಆರ್‌ಐ) ಇಂಡಿಯಾ ಸಹಯೋಗದಲ್ಲಿ ಪಾಲುದಾರ ಸಂಸ್ಥೆಗಳಿಗಾಗಿ ಮಂಗಳವಾರ ಆಯೋಜಿಸಿದ್ದ “ಇಂಧನ ಸಂರಕ್ಷಣೆ ಹಾಗೂ ಇಂಧನ ದಕ್ಷತೆ ನೀತಿ-2022-27” ಅನುಷ್ಠಾನ ಕುರಿತ ಎರಡನೇ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ ವಿಷಯ ತಿಳಿಸಿದರು.

“ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆಯ 744 ಮಿಲಿಯನ್ ಕಿ.ವ್ಯಾ. ಯೂನಿಟ್ ಉಳಿತಾಯದ ಗುರಿಯನ್ನು ಮೀರಿ 800 ಕ್ಕೂ ಹೆಚ್ಚು ಮಿಲಿಯನ್ ಯೂನಿಟ್ ಉಳಿತಾಯದ ಸಾಧನೆ ಮಾಡಲಾಗಿದೆ. ವಲಯಾವಾರು ಗುರಿ ನಿಗದಿಪಡಿಸುವ ಮೂಲಕ ಇಂಧನ ಉಳಿತಾಯ ಹಾಗೂ ದಕ್ಷತೆಯ ಗುರಿ ಸಾಧಿಸಲಾಗಿದೆ. ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿಯ ಅನುಷ್ಠಾನಕ್ಕೆ‌ ನೋಡಲ್‌ ಏಜೆನ್ಸಿಯಾಗಿರುವ ಕ್ರೆಡಲ್ ಸಂಬಂಧಪಟ್ಟ ಎಲ್ಲ ಇಲಾಖೆ ಹಾಗೂ ಇಂಧನ ವಲಯದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವ ವಿಶ್ವಾಸ ಇದೆ” ಎಂದು ಅವರು ಹೇಳಿದರು.

“ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಸಮರ್ಥ ನಾಯಕತ್ವದಲ್ಲಿ ಇಂಧನ ಉಳಿತಾಯ ಮತ್ತು ಇಂಧನ ದಕ್ಷತೆಯ ನೀತಿ ರೂಪಿಸಿ, ಅನುಷ್ಠಾನದಲ್ಲಿ ಕರ್ನಾಟಕ ಮಹತ್ವದ ಸಾಧನೆ ಮಾಡಿದೆ. ಶುದ್ಧ ಇಂಧನ ಉತ್ಪಾದನೆ ಹಾಗೂ ನವೀನ ಇಂಧನ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ವಾರ್ಷಿಕ ಕ್ರಿಯಾ ಯೋಜನೆ ಮತ್ತು ಇಂಧನ ಉಳಿತಾಯ ವರದಿ ತಯಾರಿಕೆ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಡಬ್ಲ್ಯೂಆರ್‌ಐ ಇಂಡಿಯಾ ಚಿಂತಕರ ಚಾವಡಿಯಾಗಿ ಕಾರ್ಯನಿರ್ವಸುತ್ತಿದೆ”, ಎಂದರು.

ಇಂಧನ ಉಳಿತಾಯ ಹಾಗೂ ಇಂಧನ ದಕ್ಷತೆಯ ಜಾಗತಿಕ ಮಾನದಂಡಗಳ ಕುರಿತು ಮಾತನಾಡಿದ ಇನ್ಫೋಸಿಸ್ ಸಹಾಯಕ ಉಪಾಧ್ಯಕ್ಷ ಗುರುಪ್ರಕಾಶ್ ಶಾಸ್ತ್ರಿ , ಸುಸ್ಥಿರ ಕಟ್ಟಡ ವಿನ್ಯಾಸ ಹಾಗೂ ವಿದ್ಯುತ್ ದಕ್ಷತೆಯಲ್ಲಿ ಅಳವಡಿಸಿಕೊಂಡಿರುವ ಕ್ರಮಗಳು ಹಾಗೂ ‘ನೆಟ್ ಜೀರೋ’ ಗುರಿಗಳನ್ನು ವಿವರಿಸಿದರು.

ಇಂಧನ ಉಳಿತಾಯ ಹಾಗೂ ದಕ್ಷತೆ ಅನುಷ್ಠಾನದ ಕಾರ್ಯಗಾರದಲ್ಲಿ ಭಾಗಿಯಾಗಿದ್ದ 28 ಎಸ್‌ಆರ್‌ಓಗಳು ಪ್ರತಿನಿಧಿಗಳನ್ನೊಳಗೊಂಡ ತಂಡಗಳೊಂದಿಗೆ ವಾರ್ಷಿಕ ಕ್ರಿಯಾ ಯೋಜನೆ ಮತ್ತು ಇಂಧನ ಸಂರಕ್ಷಣೆಯ ವರದಿ ತಯಾರಿಕೆಯ ಕುರಿತು ಡಬ್ಲ್ಯೂಆರ್‌ಐ ನೇತೃತ್ವದಲ್ಲಿ ಚರ್ಚೆ ನಡೆಯಿತು.

ಕ್ರೆಡಲ್ ಡಿಜಿಎಂ (ತಾಂತ್ರಿಕ) ಸಿ.ಕೆ.ಶ್ರೀನಾಥ್, ಕ್ರೆಡಲ್ ಇಸಿ ಮತ್ತು ಇಇ ವಿಭಾಗದ ಎಜಿಎಂ ಲಲಿತಾ, ಡಬ್ಲ್ಯೂ ಆರ್ ಐ ಇಂಡಿಯಾ ಎನರ್ಜಿ ವಿಭಾಗದ ಉಪ ನಿರ್ದೇಶಕ ದೀಪಕ್ ಕೃಷ್ಣನ್, ಡಬ್ಲ್ಯೂ ಆರ್ ಐ ಇಂಡಿಯಾದ ಸುಮೇದಾ ಮಾಳವಿಯಾ, ಇನ್ಫೋಸಿಸ್ ಸಹಾಯಕ ಉಪಾಧ್ಯಕ್ಷ ಗುರುಪ್ರಕಾಶ್ ಶಾಸ್ತ್ರಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

12 mins ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

1 hour ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

1 hour ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

1 hour ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

5 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

5 hours ago