ರಾಜ್ಯ

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ : ರಾಜ್ಯದ 18 ಕಡೆ ಇಡಿ ದಾಳಿ

ಬೆಂಗಳೂರು : ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನ ಬಿಎಂಎಸ್ ಕಾಲೇಜು ಸೇರಿ ಕರ್ನಾಟಕದ 18 ಕಡೆ ಇಡಿ ದಾಳಿ ಮಾಡಿದೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಕೂಡ ಇಡಿ ದಾಳಿ ಮಾಡಿದ್ದು, ಬೆಳಿಗ್ಗೆ 6 ಗಂಟೆಯಿಂದ ಅಧಿಕಾರಿಗಳು ಕಡತಗಳ ಪರಿಶೀಲನೆ ಮಾಡಿದರು.

2021-22 ರಲ್ಲಿ ನಡೆದಿದ್ದ ಸೀಟ್ ಬ್ಲಾಕಿಂಗ್ ದಂಧೆಯಲ್ಲಿ ಬಿಎಂಎಸ್ ಕಾಲೇಜಿನ ಟ್ರಸ್ಟ್ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸೀಟ್ ಬ್ಲಾಕಿಂಗ್ ಕುರಿತು ರಮೇಶ್ ನಾಯಕ್ ದೂರು ನೀಡಿದ್ದರು. ಹಾಗಾಗಿ ಟ್ರಸ್ಟ್ ಅಧ್ಯಕ್ಷೆ ರಾಗಿಣಿ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಎಐಸಿಟಿಇ, ಯುಜಿಸಿ ನಿಯಮ ಉಲ್ಲಂಘಿಸಿ ಮೆರಿಟ್ ಸೀಟ್ ಹಂಚಿಕೆ ಮಾಡದೆ, ಅಕ್ರಮವಾಗಿ ಏಜೆಂಟ್‌ಗಳ ಮೂಲಕ ಸೀಟ್ ಹಂಚಿಕೆ ಮಾಡಲಾಗಿತ್ತು. ಆ ಮೂಲಕ ಖಾಸಗಿ ಕಾಲೇಜುಗಳು ಕೋಟ್ಯಂತರ ರೂ. ಹಣ ಸಂಗ್ರಹ ಮಾಡಿರುವ ಆರೋಪ ಕೇಳಿಬಂದಿತ್ತು.

ಎರಡನೇ ಬಾರಿಗೆ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೆ ಇಡಿ ದಾಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೆ ಇಡಿ ಅಽಕಾರಿಗಳು ದಾಳಿ ಮಾಡಿದ್ದಾರೆ. ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಆರೋಪದ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೆ ದಾಳಿ ಮಾಡಿರುವ ಅಽಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡಿದರು.

ಏನಿದು ಸೀಟ್ ಬ್ಲಾಕಿಂಗ್ ದಂಧೆ?
ಸೀಟ್‌ಗಳನ್ನು ಮೊದಲೇ ಕಾಯ್ದಿರಿಸುವುದು ಅಥವಾ ರಿಸರ್ವೇಶನ್ ಪದ್ಧತಿ ಎನ್ನಬಹುದು. ಕೆಲವು ಪ್ರತಿಷ್ಠಿತ ಕಾಲೇಜುಗಳು ಮುಂಬರುವ ಶೈಕ್ಷಣಿಕ ವರ್ಷಕ್ಕೂ ಮೊದಲೇ ಸೀಟ್‌ಗಳನ್ನು ರಿಸರ್ವ್ ಮಾಡುತ್ತವೆ ಎನ್ನಬಹುದು.
ಪ್ರತಿ ವರ್ಷ ಅತ್ಯುತ್ತಮ ಕಾಲೇಜುಗಳಿಗೆ ಸೇರಬೇಕೆಂಬುದು ಮಕ್ಕಳು ಮತ್ತು ಪೋಷಕರಲ್ಲಿ ತವಕ ಹೆಚ್ಚಿದೆ. ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಸಂಸ್ಥೆಗಳು ಈ ಸೀಟ್ ಬ್ಲಾಕಿಂಗ್ ದಂಧೆ ನಡೆಸಿವೆ.

ಏನಿದು ಪ್ರಕರಣ?
ರಾಜ್ಯದಲ್ಲಿ ಇಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಬ್ಬಂದಿ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿತ್ತು. 2024-25ನೇ ಸಾಲಿಗಾಗಿ ವಿವಿಧ ಸ್ನಾತಕ ಇಂಜಿನಿಯರಿಂಗ್ ಕೋರ್ಸ್ ಪ್ರವೇಶದ ವೇಳೆಯಲ್ಲಿ ಕೆಇಎ ಅಧಿಕಾರಿಯೊಬ್ಬರು ಸೀಟು ಬ್ಲಾಕಿಂಗ್ ಅನುಮಾನದ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ನಂತರ ನವೆಂಬರ್ 13 ರಂದು ಈ ಹಗರಣ ಬೆಳಕಿಗೆ ಬಂದಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅರಮನೆ ಸುತ್ತಲಿನ ಪಾದಚಾರಿ ಮಾರ್ಗ ದುರಸ್ತಿ ಮಾಡಿ

ಮೈಸೂರಿನ ಅರಮನೆ ವೀಕ್ಷಣೆಗೆ ಪ್ರತಿನಿತ್ಯ ಸಾವಿರಾರು ಜನ ಪ್ರವಾಸಿಗರು ಆಗಮಿಸುತ್ತಾರೆ. ಅರಮನೆಯ ಸುತ್ತಲೂ ನಿರ್ಮಾಣವಾಗಿರುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ಚಪ್ಪಡಿ…

55 seconds ago

ಓದುಗರ ಪತ್ರ: ಕೆರೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ತುಂಬಿಸಿ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ, ಬೂಕನಕೆರೆ ಹೋಬಳಿಯ ಬಹುಪಾಲು ಪ್ರದೇಶಗಳಲ್ಲಿ ಈ ವರ್ಷ ಪೂರ್ವ ಮುಂಗಾರು ಮಳೆ ಆಗದೆ, ಬೆಳೆ…

3 mins ago

ಓದುಗರ ಪತ್ರ: ಕೋಚಿಂಗ್ ದಂಧೆಗೆ ಕಡಿವಾಣ ಹಾಕಿ

ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ…

5 mins ago

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

3 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

3 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

3 hours ago