ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಸಾಥ್ ನೀಡಿರುವ ಮೈತ್ರಿ ಪಕ್ಷ ಜೆಡಿಸ್ ಪೋಸ್ಟರ್ ವಾರ್ ಶುರುಮಾಡಿದೆ. ನಗರದ ಹಲವು ಕಡೆಗಳಲ್ಲಿ ‘ಸಾಕಪ್ಪ ಸಾಕು ಕಾಂಗ್ರೆಸ್’ ಪೋಸ್ಟರ್ ಗಮನ ಸೆಳೆಯುತ್ತಿದೆ.
ಬಸ್ ಗಳಲ್ಲಿ, ವಿಧಾನಸೌಧದ ಬೀದಿಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟರ್ ಸಮರಕ್ಕಿಳಿದಿದೆ. ಬೆಲೆ ಏರಿಕೆಯನ್ನು ಕೂಡಲೇ ಇಳಿಕೆ ಮಾಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಪೋಸ್ಟರ್ನಲ್ಲಿ ಏನಿದೆ?
ಸಾಕಪ್ಪ ಸಾಕು ಕಾಂಗ್ರೆಸ್ ಎಂಬ ಹೆಸರಿನಲ್ಲಿ ಪೋಸ್ಟರ್ ಹಾಕಲಾಗಿದೆ. ಪೋಸ್ಟರ್ ನಲ್ಲಿ ಸ್ಕ್ಯಾನ್ ಮಾಡಲು ಅವಕಾಶ ನೀಡಲಾಗಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ಸಾಕಪ್ಪ ಸಾಕು ಕಾಂಗ್ರೆಸ್ ವೆಬ್ ಸೈಟ್ ತೆರೆದುಕೊಳ್ಳುತ್ತದೆ. ಇದರಲ್ಲಿ ಸರ್ಕಾರ ಬೆಲೆ ಏರಿಕೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ.
ಅಷ್ಟೇ ಅಲ್ಲದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಫೋಟೋ ಹಾಕಿ ಹೆಂಗೆ ನಾವು ಸಚಿವರಿಗೆ ಹನಿಟ್ರ್ಯಾಪ್, ಹೈಕಮಾಂಡ್ ಗೆ ಹನಿಟ್ರ್ಯಾಪ್ ಹಾಗೂ ಜನರಿಗೆ ತೆರಿಗೆ ಟ್ರ್ಯಾಪ್ ಎಂದು ಬರೆಯಲಾಗಿದೆ.
ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ವತಿಯಿಂದ ಶನಿವಾರ ವಿಧಾನಸೌಧದ ಚಲೋ ಪ್ರತಿಭಟನೆ ನಡೆಯಲಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಈ ಹಿಂದೆ ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಪೇ ಸಿಎಂ ಅಭಿಯಾನ ನಡೆಸಿತ್ತು. ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಪೇ ಸಿಎಂ ಪೋಸ್ಟರ್ ಅಭಿಯಾನದ ಮೂಲಕ ಗಮನ ಸೆಳೆದಿತ್ತು. ಇದೀಗ ಅದೇ ತಂತ್ರಗಾರಿಕೆಯನ್ನು ಬಳಸಿಕೊಂಡು ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಿರುಗೇಟು ನೀಡಿದೆ.
ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…
ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…
ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…
ಕೊಹ್ಲಿ-ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್, ಎಸ್ಆರ್ಎಚ್ ವಿರುದ್ಧ ಭರ್ಜರಿ ಜಯ ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಸನ್…
ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ…