ರಾಜ್ಯ

ಸಾಕಪ್ಪ ಸಾಕು! ಕಾಂಗ್ರೆಸ್‌ ಸರ್ಕಾರ : ಬೆಲೆ ಏರಿಕೆ ವಿರುದ್ಧ ಜೆಡಿಎಸ್‌ ವಿಭಿನ್ನ ಅಭಿಯಾನ

ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಸಾಥ್‌ ನೀಡಿರುವ ಮೈತ್ರಿ ಪಕ್ಷ ಜೆಡಿಸ್‌  ಪೋಸ್ಟರ್ ವಾರ್ ಶುರುಮಾಡಿದೆ. ನಗರದ ಹಲವು ಕಡೆಗಳಲ್ಲಿ ‘ಸಾಕಪ್ಪ ಸಾಕು ಕಾಂಗ್ರೆಸ್’ ಪೋಸ್ಟರ್ ಗಮನ ಸೆಳೆಯುತ್ತಿದೆ.

ಬಸ್ ಗಳಲ್ಲಿ, ವಿಧಾನಸೌಧದ ಬೀದಿಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಈ  ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟರ್ ಸಮರಕ್ಕಿಳಿದಿದೆ. ಬೆಲೆ ಏರಿಕೆಯನ್ನು ಕೂಡಲೇ ಇಳಿಕೆ ಮಾಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.

ಪೋಸ್ಟರ್‌ನಲ್ಲಿ ಏನಿದೆ?
ಸಾಕಪ್ಪ ಸಾಕು ಕಾಂಗ್ರೆಸ್ ಎಂಬ ಹೆಸರಿನಲ್ಲಿ ಪೋಸ್ಟರ್ ಹಾಕಲಾಗಿದೆ. ಪೋಸ್ಟರ್ ನಲ್ಲಿ ಸ್ಕ್ಯಾನ್ ಮಾಡಲು ಅವಕಾಶ ನೀಡಲಾಗಿದೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ಸಾಕಪ್ಪ ಸಾಕು ಕಾಂಗ್ರೆಸ್ ವೆಬ್ ಸೈಟ್ ತೆರೆದುಕೊಳ್ಳುತ್ತದೆ. ಇದರಲ್ಲಿ ಸರ್ಕಾರ ಬೆಲೆ ಏರಿಕೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ.

ಅಷ್ಟೇ ಅಲ್ಲದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಫೋಟೋ ಹಾಕಿ ಹೆಂಗೆ ನಾವು ಸಚಿವರಿಗೆ ಹನಿಟ್ರ್ಯಾಪ್, ಹೈಕಮಾಂಡ್ ಗೆ ಹನಿಟ್ರ್ಯಾಪ್ ಹಾಗೂ ಜನರಿಗೆ ತೆರಿಗೆ ಟ್ರ್ಯಾಪ್ ಎಂದು ಬರೆಯಲಾಗಿದೆ.

ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ವತಿಯಿಂದ ಶನಿವಾರ ವಿಧಾನಸೌಧದ ಚಲೋ ಪ್ರತಿಭಟನೆ ನಡೆಯಲಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಈ ಹಿಂದೆ ಕಾಂಗ್ರೆಸ್ ವಿರೋಧ ಪಕ್ಷದಲ್ಲಿದ್ದಾಗ ಪೇ ಸಿಎಂ ಅಭಿಯಾನ ನಡೆಸಿತ್ತು. ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಪೇ ಸಿಎಂ ಪೋಸ್ಟರ್ ಅಭಿಯಾನದ ಮೂಲಕ ಗಮನ ಸೆಳೆದಿತ್ತು. ಇದೀಗ ಅದೇ ತಂತ್ರಗಾರಿಕೆಯನ್ನು ಬಳಸಿಕೊಂಡು ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಿರುಗೇಟು ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಜನರ ಸೇವೆಗೆ ಎಟುಕದ ಅರಕೆರೆ ನಾಡಕಚೇರಿ’

ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…

5 mins ago

ಗಣಗೂರು ವ್ಯಾಪ್ತಿಯಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…

9 mins ago

ಮೈಸೂರು ಆಯ್ತು; ಈಗ ಜಿಲ್ಲೆಗೂ ಹಬ್ಬಿದ ಮಾದಕ ವಸ್ತುವಿನ ಘಾಟು

ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…

14 mins ago

ಉದ್ಘಾಟನಾ ಪಂದ್ಯದಲ್ಲಿ ಮಿಂಚಿದ ಆರ್‌ಸಿಬಿ

ಕೊಹ್ಲಿ-ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್, ಎಸ್‌ಆರ್‌ಎಚ್ ವಿರುದ್ಧ ಭರ್ಜರಿ ಜಯ ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಸನ್…

26 mins ago

ವೈರಮುಡಿ ಬ್ರಹ್ಮೋತ್ಸವ

ಮಂಡ್ಯ: ಇತಿಹಾಸ ಪ್ರಸಿದ್ಧ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಶನಿವಾರ ರಾತ್ರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮೇಲು ಕೋಟೆಯ…

30 mins ago