ರಾಜ್ಯ

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಅಂಗನವಾಡಿ ಶಿಕ್ಷಕಿಯರ ನೇಮಕಾತಿಯಲ್ಲಿ ಮೆರಿಟ್ ಗೆ ಆದ್ಯತೆ ಇರಲಿ
ಗೃಹಲಕ್ಷ್ಮಿ ‘ರೀಲ್ಸ್’ ಮಾಡುವರಿಗೆ ಪ್ರೋತ್ಸಾಹಿಸಿ
ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ತುಮಕೂರು: ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು.

ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಡಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದರು.

ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ, ಜಿಲ್ಲಾ ಹಾಗೂ ತಾಲ್ಲೂಕು ಶಿಶುಪಾಲನಾ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ವರ್ಕಿಂಗ್ ವುಮೆನ್ಸ್ ಹಾಸ್ಟೆಲ್
ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸೂಕ್ತ ಜಾಗ ನೀಡಿದರೆ ನಗರದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸಲಾಗುವುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ರೀಲ್ಸ್ ಗೆ ಪ್ರೋತ್ಸಾಹಿಸಿ
ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕು. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನ ಪ್ರತಿಯೊಬ್ಬರಿಗೂ ತಿಳಿಯಬೇಕು. ರೀಲ್ಸ್ ಮಾಡುವ ಮಹಿಳೆಯರಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಪ್ರೋತ್ಸಾಹ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ
ತುಮಕೂರು ಜಿಲ್ಲೆಯಲ್ಲಿ 234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲಾಗುವುದು. ತುಮಕೂರು ನಗರದಲ್ಲಿ ಸಿಎ ಸೈಟ್ ಸಿಕ್ಕರೆ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಸಹಾಯವಾಣಿ ಕೇಂದ್ರಕ್ಕೆ ಖುದ್ದು ಸಚಿವರೇ ಫೋನ್ ಮಾಡಿ ಮಾತನಾಡಿದರು. ಸಹಾಯವಾಣಿ ಸಿಬ್ಬಂದಿಯೊಂದಿಗೆ ಅಪರಿಚಿತರಂತೆ ಮಾತನಾಡಿದ ಸಚಿವರು, ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಡಳಿತದ ವತಿಯಿಂದ ಸಚಿವರಿಗೆ ಸನ್ಮಾನ
ಸಭೆ ಬಳಿಕ ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತುಮಕೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಶಿರಾ ಕ್ಷೇತ್ರದ ಶಾಸಕರೂ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳೂ ಆಗಿರುವ ಟಿ.ಬಿ.ಜಯಚಂದ್ರ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಇಲಾಖೆಯ ನಿರ್ದೇಶಕರಾದ ಸಿದ್ದೇಶ್ವರ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಮರಿಯಪ್ಪ, ವಿಕಲ ಚೇತನ ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪಾ ರಾಯ್ಕರ್ ಸೇರಿದಂತೆ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

30 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

2 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

2 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

2 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

2 hours ago

ಓದುಗರ ಪತ್ರ: ಪಾದಚಾರಿ ಮಾರ್ಗ ಒತ್ತುವರಿ ತೆರವು ಸ್ವಾಗತಾರ್ಹ

ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…

2 hours ago