ರಾಜ್ಯ

ಕಾಂಗ್ರೆಸ್ ಆಳ್ವಿಕೆಯಲ್ಲಿ ಇಡೀ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ: ಬಿಜೆಪಿ ವ್ಯಂಗ್ಯ

ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಬಿಜೆಪಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಳ್ವಿಕೆಯಲ್ಲಿ ಇಡೀ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ವ್ಯಂಗ್ಯವಾಡಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರ ನೆರಳಿನ ಫೋಟೋ ಹಾಕಿ, ವಿವಿಧ ಯೋಜನೆಗಳಿಗೆ ಗ್ರಹಣ ಹಿಡಿದಿದೆ ಎಂದು ಬರೆದುಕೊಂಡಿದೆ.

ಕಾವೇರಿಗೆ, ವಿದ್ಯುತ್ಗೆ, ಅಭಿವೃದ್ಧಿಗೆ, ಅನ್ನಭಾಗ್ಯಕ್ಕೆ, ಕೈಗಾರಿಕೆಗಳಿಗೆ, ಕುಡಿಯುವ ನೀರಿಗೆ, ಕೃಷಿ ಉತ್ಪನ್ನಗಳಿಗೆ ಹಾಗೂ ಬ್ರ್ಯಾಂಡ್ ಬೆಂಗಳೂರಿಗೆ ಗ್ರಹಣ ಹಿಡಿದೆದೆ. 30 ವರ್ಷಗಳ ಹಿಂದಿನ “ಆ ದಿನಗಳ ಗ್ರಹಣ” ಇದೀಗ ಸಿದ್ದರಾಮಯ್ಯರವರ ಸರ್ಕಾರದ ಕೃಪೆಯಿಂದ ಕರ್ನಾಟಕಕ್ಕೆ ಮತ್ತೊಮ್ಮೆ ವಕ್ಕರಿಸಿದೆ ಎಂದು ವಾಗ್ದಾಳಿ ನಡೆಸಿದೆ.

ಸರ್ಕಾರ ಜೇಬುಗಳ್ಳತನಕ್ಕೆ ಇಳಿದಿದೆ, ಎಚ್ಚರಿಕೆ ಎಂದು ಬಸ್ಗಳಲ್ಲಿ ಹಾಕಬೇಕು. ಸಾಮಾನ್ಯ ಬಸ್ಗಳ ದರವನ್ನೂ ನಾಲ್ಕೇ ತಿಂಗಳಲ್ಲಿ 20% ರಷ್ಟು ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರ ಹಗಲು ದರೋಡೆಗೆ ಇಳಿದಿದೆ. ಮೊದಲು 160 ರೂ. ನಲ್ಲಿ ಮುಗಿಯುತ್ತಿದ್ದ ಪ್ರಯಾಣಕ್ಕೆ ಈಗ 200 ರೂ, ಮಾಡಿ ಕೈ ಸುಟ್ಟುಕೊಳ್ಳಬೇಕಾಗಿದೆ. ಇನ್ನು ಒಂದೇ ತಿಂಗಳಲ್ಲಿ ಸ್ಥಗಿತಗೊಳ್ಳಲಿರುವ ಶಕ್ತಿ ಯೋಜನೆಯ ಎಲ್ಲಾ ಹೊರೆಯನ್ನೂ ಕರ್ನಾಟಕದ ಜನ ಹೊರಬೇಕಿರುವುದು ನಿಶ್ಚಿತ ಎಂದು ಹೇಳಿಕೊಂಡಿದೆ.

ಇದರೊಂದಿಗೆ ಸರ್ಕಾರ ನೇರವಾಗಿ ಪರೀಕ್ಷಾ ಅಕ್ರಮಕ್ಕೆ ಕುಮ್ಮಕ್ಕು ಕೊಡುತ್ತಿದೆ. ನೇಮಕಾತಿ ಪರೀಕ್ಷೆಯಲ್ಲೂ ಸಹ ಕಲೆಕ್ಷನ್ಗೆ ಇಳಿದಿದೆ. ಕರ್ನಾಟಕ 30 ವರ್ಷಗಳ ಹಿಂದಿನ `ಆ ದಿನಗಳ ಗ್ರಹಣ’ ಇದೀಗ ಸಿದ್ದರಾಮಯ್ಯರವರ ಸರ್ಕಾರದ ಕೃಪೆಯಿಂದ ಕರ್ನಾಟಕಕ್ಕೆ ಮತ್ತೊಮ್ಮೆ ಬಂದಿದೆ ಎಂದು ಬಿಜೆಪಿ ಕಿಡಿಕಾರಿದೆ.

andolanait

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

8 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

33 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

59 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago