ರಾಜ್ಯ

ಕಾಂಗ್ರೆಸ್ ಆಳ್ವಿಕೆಯಲ್ಲಿ ಇಡೀ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ: ಬಿಜೆಪಿ ವ್ಯಂಗ್ಯ

ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಬಿಜೆಪಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಳ್ವಿಕೆಯಲ್ಲಿ ಇಡೀ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ವ್ಯಂಗ್ಯವಾಡಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರ ನೆರಳಿನ ಫೋಟೋ ಹಾಕಿ, ವಿವಿಧ ಯೋಜನೆಗಳಿಗೆ ಗ್ರಹಣ ಹಿಡಿದಿದೆ ಎಂದು ಬರೆದುಕೊಂಡಿದೆ.

ಕಾವೇರಿಗೆ, ವಿದ್ಯುತ್ಗೆ, ಅಭಿವೃದ್ಧಿಗೆ, ಅನ್ನಭಾಗ್ಯಕ್ಕೆ, ಕೈಗಾರಿಕೆಗಳಿಗೆ, ಕುಡಿಯುವ ನೀರಿಗೆ, ಕೃಷಿ ಉತ್ಪನ್ನಗಳಿಗೆ ಹಾಗೂ ಬ್ರ್ಯಾಂಡ್ ಬೆಂಗಳೂರಿಗೆ ಗ್ರಹಣ ಹಿಡಿದೆದೆ. 30 ವರ್ಷಗಳ ಹಿಂದಿನ “ಆ ದಿನಗಳ ಗ್ರಹಣ” ಇದೀಗ ಸಿದ್ದರಾಮಯ್ಯರವರ ಸರ್ಕಾರದ ಕೃಪೆಯಿಂದ ಕರ್ನಾಟಕಕ್ಕೆ ಮತ್ತೊಮ್ಮೆ ವಕ್ಕರಿಸಿದೆ ಎಂದು ವಾಗ್ದಾಳಿ ನಡೆಸಿದೆ.

ಸರ್ಕಾರ ಜೇಬುಗಳ್ಳತನಕ್ಕೆ ಇಳಿದಿದೆ, ಎಚ್ಚರಿಕೆ ಎಂದು ಬಸ್ಗಳಲ್ಲಿ ಹಾಕಬೇಕು. ಸಾಮಾನ್ಯ ಬಸ್ಗಳ ದರವನ್ನೂ ನಾಲ್ಕೇ ತಿಂಗಳಲ್ಲಿ 20% ರಷ್ಟು ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರ ಹಗಲು ದರೋಡೆಗೆ ಇಳಿದಿದೆ. ಮೊದಲು 160 ರೂ. ನಲ್ಲಿ ಮುಗಿಯುತ್ತಿದ್ದ ಪ್ರಯಾಣಕ್ಕೆ ಈಗ 200 ರೂ, ಮಾಡಿ ಕೈ ಸುಟ್ಟುಕೊಳ್ಳಬೇಕಾಗಿದೆ. ಇನ್ನು ಒಂದೇ ತಿಂಗಳಲ್ಲಿ ಸ್ಥಗಿತಗೊಳ್ಳಲಿರುವ ಶಕ್ತಿ ಯೋಜನೆಯ ಎಲ್ಲಾ ಹೊರೆಯನ್ನೂ ಕರ್ನಾಟಕದ ಜನ ಹೊರಬೇಕಿರುವುದು ನಿಶ್ಚಿತ ಎಂದು ಹೇಳಿಕೊಂಡಿದೆ.

ಇದರೊಂದಿಗೆ ಸರ್ಕಾರ ನೇರವಾಗಿ ಪರೀಕ್ಷಾ ಅಕ್ರಮಕ್ಕೆ ಕುಮ್ಮಕ್ಕು ಕೊಡುತ್ತಿದೆ. ನೇಮಕಾತಿ ಪರೀಕ್ಷೆಯಲ್ಲೂ ಸಹ ಕಲೆಕ್ಷನ್ಗೆ ಇಳಿದಿದೆ. ಕರ್ನಾಟಕ 30 ವರ್ಷಗಳ ಹಿಂದಿನ `ಆ ದಿನಗಳ ಗ್ರಹಣ’ ಇದೀಗ ಸಿದ್ದರಾಮಯ್ಯರವರ ಸರ್ಕಾರದ ಕೃಪೆಯಿಂದ ಕರ್ನಾಟಕಕ್ಕೆ ಮತ್ತೊಮ್ಮೆ ಬಂದಿದೆ ಎಂದು ಬಿಜೆಪಿ ಕಿಡಿಕಾರಿದೆ.

andolanait

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

1 hour ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

1 hour ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

1 hour ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

2 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

2 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

2 hours ago