ಬೆಂಗಳೂರು: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ಇಪಿಎಫ್ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್ಗೆ ಹೈಕೋರ್ಟ್ ತಡೆ ನೀಡಿದ್ದು, ಬಿಗ್ ರಿಲೀಫ್ ನೀಡಿದೆ.
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಪಾಲುದಾರನಾಗಿದ್ದ ಕಂಪನಿಯಲ್ಲಿ ಉದ್ಯೋಗಿಗಳಿಗೆ ಇಪಿಎಫ್ ಹಣ ಪಾವತಿ ಮಾಡದೆ ವಂಚಿಸಲಾಗಿದೆ ಎಂಬ ಆರೋಪದ ಮೇಲೆ ಬಂಧನ ವಾರೆಂಟ್ ಜಾರಿಯಾಗಿತ್ತು. ಈ ಆರೋಪ ವಿಚಾರವಾಗಿ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಹೊರಡಿಸಿರುವ ರಿಕವರಿ ನೋಟಿಸ್ ಹಾಗೂ ಬಂಧನ ವಾರೆಂಟ್ ಪ್ರಶ್ನಿಸಿ ಉತ್ತಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ರಜಾಕಾಲದ ನ್ಯಾಯಪೀಠವೂ ನ್ಯಾಯಪೀಠವೂ ಬಂಧನ ವಾರೆಂಟ್ ಅನ್ನು ತಡೆ ಹಿಡಿಯಲಾಗಿದೆ ಎಂದು ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ರಾಬಿನ್ ಉತ್ತಪ್ಪ ಮೆಸಸ್ ಸೆಂಚುರಿಸ್ ಲೈಫ್-ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಕಂಪಡೆನಿಗೆ ಪಾಲುದಾರರಾಗಿದ್ದರು. ಈ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅನೇಕ ಉದ್ಯೋಗಿಗಳಿಗೆ ಇಪಿಎಫ್ ಹಣ ಪಾವತಿಸಿರಲಿಲ್ಲ. ವೇತನದಲ್ಲಿ ಸುಮಾರು 23 ಲಕ್ಷ ರೂ.ಗಳಷ್ಟು ಇಪಿಎಫ್ ಹಣ ಕಡಿತಗೊಳಿಸಿಕೊಂಡು , ಉದ್ಯೋಗಿಗಳ ಖಾತೆಗೆ ಹಾಕದೇ ವಂಚಿಸಿರುವ ಆರೋಪ ಕೇಳಿ ಬಂದಿತ್ತು.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…