ಬೆಂಗಳೂರು: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧದ ಇಪಿಎಫ್ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್ಗೆ ಹೈಕೋರ್ಟ್ ತಡೆ ನೀಡಿದ್ದು, ಬಿಗ್ ರಿಲೀಫ್ ನೀಡಿದೆ.
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಪಾಲುದಾರನಾಗಿದ್ದ ಕಂಪನಿಯಲ್ಲಿ ಉದ್ಯೋಗಿಗಳಿಗೆ ಇಪಿಎಫ್ ಹಣ ಪಾವತಿ ಮಾಡದೆ ವಂಚಿಸಲಾಗಿದೆ ಎಂಬ ಆರೋಪದ ಮೇಲೆ ಬಂಧನ ವಾರೆಂಟ್ ಜಾರಿಯಾಗಿತ್ತು. ಈ ಆರೋಪ ವಿಚಾರವಾಗಿ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಹೊರಡಿಸಿರುವ ರಿಕವರಿ ನೋಟಿಸ್ ಹಾಗೂ ಬಂಧನ ವಾರೆಂಟ್ ಪ್ರಶ್ನಿಸಿ ಉತ್ತಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ರಜಾಕಾಲದ ನ್ಯಾಯಪೀಠವೂ ನ್ಯಾಯಪೀಠವೂ ಬಂಧನ ವಾರೆಂಟ್ ಅನ್ನು ತಡೆ ಹಿಡಿಯಲಾಗಿದೆ ಎಂದು ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
ರಾಬಿನ್ ಉತ್ತಪ್ಪ ಮೆಸಸ್ ಸೆಂಚುರಿಸ್ ಲೈಫ್-ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಕಂಪಡೆನಿಗೆ ಪಾಲುದಾರರಾಗಿದ್ದರು. ಈ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅನೇಕ ಉದ್ಯೋಗಿಗಳಿಗೆ ಇಪಿಎಫ್ ಹಣ ಪಾವತಿಸಿರಲಿಲ್ಲ. ವೇತನದಲ್ಲಿ ಸುಮಾರು 23 ಲಕ್ಷ ರೂ.ಗಳಷ್ಟು ಇಪಿಎಫ್ ಹಣ ಕಡಿತಗೊಳಿಸಿಕೊಂಡು , ಉದ್ಯೋಗಿಗಳ ಖಾತೆಗೆ ಹಾಕದೇ ವಂಚಿಸಿರುವ ಆರೋಪ ಕೇಳಿ ಬಂದಿತ್ತು.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…