ಬೆಂಗಳೂರು: ಪ್ರಯಾಗ್ ರಾಜ್ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ರಸ್ತೆ ಮಾರ್ಗದ ಬಳಿ ನಡೆದ ಅಪಘಾತದಲ್ಲಿ ಬೀದರ್ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಹಣವನ್ನು ಘೋಷಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಹಾಗೂ ಲಾರಿ ಮುಖಾಮುಖಿಯಾಗಿದ್ದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಐವರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿರುವ ವಿಚಾರ ತಿಳಿದು ಅಘಾತವಾಯಿತು. ಹೀಗಾಗಿ ತಕ್ಷಣ ಬೀದರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥಿವ ಶರೀರವನ್ನು ತರಲು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇನ್ನು ಉತ್ತರಪ್ರರದೇಶದಲ್ಲಿ ಕರ್ನಾಟಕದವರಾದ ಚನ್ನಪ್ಪ ಎಂಬ ಅಧಿಕಾರಿಯೊಂದಿಗೆ ಚರ್ಚಿಸಿ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ಹೇಳಿದ್ದೇನೆ. ಅಲ್ಲದೇ ನಮ್ಮ ಸರ್ಕಾರ ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…