ರಾಜ್ಯ

ಅರಣ್ಯದಲ್ಲಿ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ: ಈಶ್ವರ್‌ ಖಂಡ್ರೆ

ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಬೇರೆ ಯಾವುದೇ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ ಎಂದು ಆದೇಶ ಹೊರಡಿಸುವಂತೆ
ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ದೂರದರ್ಶನ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಇನ್ನಿತರ ಯಾವುದೇ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗಧಿತ ಶುಲ್ಕವನ್ನು ವಿಧಿಸಬೇಕು. ಈ ನಿಗಧಿತ ಶುಲ್ಕವನ್ನು ಪಾವತಿಸಿದ ನಂತರವೇ ಚಿತ್ರೀಕರಣಕ್ಕೆ ಅವಕಾಶ ನೀಡಬೇಕು ಎಂದಿದ್ದಾರೆ.

ಸ್ಥಳೀಯ ಮಟ್ಟದ ಅಧಿಕಾರಿಗಳು ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಅಲ್ಲದೇ ಚಿತ್ರೀಕರಣದಿಂದ ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಹೀಗಾಗಿ ಅರಣ್ಯ ಮತ್ತು ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

59 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

1 hour ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

1 hour ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

1 hour ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

1 hour ago