ಬೆಂಗಳೂರು: ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಬೇರೆ ಯಾವುದೇ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಕಡ್ಡಾಯ ಎಂದು ಆದೇಶ ಹೊರಡಿಸುವಂತೆ
ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ದೂರದರ್ಶನ ಸಾಕ್ಷ್ಯಚಿತ್ರ, ಸಿನಿಮಾ ಹಾಗೂ ಧಾರಾವಾಹಿ ಸೇರಿದಂತೆ ಇನ್ನಿತರ ಯಾವುದೇ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗಧಿತ ಶುಲ್ಕವನ್ನು ವಿಧಿಸಬೇಕು. ಈ ನಿಗಧಿತ ಶುಲ್ಕವನ್ನು ಪಾವತಿಸಿದ ನಂತರವೇ ಚಿತ್ರೀಕರಣಕ್ಕೆ ಅವಕಾಶ ನೀಡಬೇಕು ಎಂದಿದ್ದಾರೆ.
ಸ್ಥಳೀಯ ಮಟ್ಟದ ಅಧಿಕಾರಿಗಳು ಚಿತ್ರೀಕರಣಕ್ಕೆ ಅನುಮತಿ ನೀಡುತ್ತಿರುವುದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಹೊರ ಜಗತ್ತಿಗೆ ಲಭಿಸುವ ಸಂಭವ ಇರುತ್ತದೆ. ಅಲ್ಲದೇ ಚಿತ್ರೀಕರಣದಿಂದ ಪರಿಸರ ಹಾಗೂ ಜೀವ ವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಹೀಗಾಗಿ ಅರಣ್ಯ ಮತ್ತು ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…