ರಾಜ್ಯ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದರು.

ಬೆಂಗಳೂರಿನಲ್ಲಿಂದು ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದರು.

ಇಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯಿತು.

ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ ಬಿ ಖಂಡ್ರೆ ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು.

ತಮ್ಮ ಪೂಜ್ಯ ತಂದೆ ಭೀಮಣ್ಣ ಖಂಡ್ರೆಯವರ ಮಾರ್ಗದಲ್ಲೇ ನಡೆದು, ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ಈಶ್ವರ ಬಿ ಖಂಡ್ರೆ ಈಗ ಮಹಾಸಭಾದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಮಾಜಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ.

ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದ ಅವರು, ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ತಾವು ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದರು.

ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಈ ನಾಡಿನ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅನುಪಮವಾದ್ದು ಎಂದು ತಿಳಿಸಿದ ಅವರು, ನಮ್ಮ ಸಮಾಜದಲ್ಲೂ ಶೇ.40ರಿಂದ 50ರಷ್ಟು ಬಡವರಿದ್ದು, ಶೇ.30ಕ್ಕಿಂತ ಹೆಚ್ಚು ಜನರು ತೀವ್ರ ಹಿಂದುಳಿದಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು. ಹೀಗಾಗಿ ಎಲ್ಲರಿಗೂ ಸಮಾನ ನ್ಯಾಯ ದೊರಕಿಸಲು ಸಭಾ ವತಿಯಿಂದ ನೂತನ ಅಧ್ಯಕ್ಷನಾಗಿ ಶ್ರಮಿಸುವುದಾಗಿ ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೇಂದ್ರದ ಸಾಲದ ನೀತಿ ಟೀಕಿಸಿದ ಸಿಎಂ ಸಿದ್ದರಾಮಯ್ಯ.

ಮೈಸೂರು: ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳ ಮಿತಿಯಲ್ಲೇ…

23 mins ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ಮೈಸೂರು: ಹೈಕಮಾಂಡ್ ಇರು ಎಂದರೆ ಇರುತ್ತೇನೆ. ಮುಂದುವರೆಯಿರಿ ಎಂದರೇ ಮುಂದುವರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ…

41 mins ago

ಹನೂರು| ಕಗ್ಗತ್ತಲ್ಲಿನಲ್ಲಿದ್ದ ಎರಡು ಬಡ ಕುಟುಂಬಗಳಿಗೆ ಆಸರೆಯಾದ ಪೇದೆ ಕುಮಾರಸ್ವಾಮಿ: ಸಾರ್ವಜನಿಕರಿಂದ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…

2 hours ago

ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಟೀಕೆ

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…

3 hours ago

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…

3 hours ago

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

3 hours ago