ರಾಜ್ಯ

ನಿಷ್ಠೆ, ದಕ್ಷತೆಯಿಂದ ಅರಣ್ಯ ರಕ್ಷಿಸಲು ಹೋರಾಡಿ: ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಕರೆ

ಬೆಂಗಳೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿ ನೇರ ನೇಮಕಾತಿಗೊಂಡಿರುವ 16 ಅಭ್ಯರ್ಥಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಪ್ರತಿಜ್ಞಾವಿಧಿ ಬೋಧಿಸಿ ವಿನೂತನವಾಗಿ ನೇಮಕಾತಿ ಪತ್ರ ವಿತರಿಸಿದರು.

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಎ.ಸಿ.ಎಫ್.ಗಳಾಗಿ ನೇಮಕಗೊಂಡಿರುವ 10 ಮಹಿಳಾ ಅಭ್ಯರ್ಥಿಗಳು ಮತ್ತು 6 ಪುರುಷ ಅಭ್ಯರ್ಥಿಗಳಿಗೆ ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿ, ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಎಲ್ಲ ವಿದ್ಯಾವಂತರಿಗೂ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುವ ಅವಕಾಶ ದೊರಕುವುದಿಲ್ಲ. ನೀವೆಲ್ಲರೂ ಪ್ರತಿಭಾವಂತರು ಮತ್ತು ಅದೃಷ್ಟವಂತರಾಗಿದ್ದೀರಿ. ನಿಮಗೆ ಲಭಿಸಿರುವ ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಅರಣ್ಯ ಮತ್ತು ಅರಣ್ಯ ಸಂಪನ್ಮೂಲ ಹಾಗೂ ವನ್ಯಜೀವಿ ಸಂರಕ್ಷಣೆ ಮಾಡುವಂತೆ ಕರೆ ನೀಡಿದರು.

ಇಂದು ಇಡೀ ವಿಶ್ವ ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಂತಹ ಬೃಹತ್ ಸವಾಲು ಎದುರಿಸುತ್ತಿದೆ. ಅರಣ್ಯ ಸಂರಕ್ಷಣೆ ಹಿಂದೆಂದಿಗಿಂತಲೂ ಇಂದು ಅತ್ಯಂತ ಮಹತ್ವದ್ದಾಗಿದೆ. ಈ ಕಾಲಘಟ್ಟದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿರುವ ನೀವು, ಅರಣ್ಯವನ್ನು ಸಂರಕ್ಷಿಸಲು ಇಲಾಖೆಗೆ ಸಹಾಯಕರಾಗಬೇಕು ಎಂದು ಹೇಳಿದರು.

ಸರ್ಕಾರಿ ಕೆಲಸ ದೇವರ ಕೆಲಸ. ಈ ಘೋಷಣೆಯನ್ನು ವಿಧಾನಸೌಧದ ಪ್ರವೇಶ ದ್ವಾರದಲ್ಲೇ ಕೆತ್ತಿಸಲಾಗಿದೆ. ನೀವೆಲ್ಲರೂ ಅರಣ್ಯ ಸಂರಕ್ಷಣೆಯನ್ನು ದೇವರ ಕೆಲಸ ಎಂದು ಮಾಡಿ. ಅರಣ್ಯ ಉಳಿಸಿ, ಪಕ್ಷಿ ಸಂಕುಲ, ಪ್ರಾಣಿ ಸಂಕುಲ ಮತ್ತು ಕೀಟ ಸಂಕುಲ ಉಳಿಸಿ, ಕಾಡನ್ನು ಕಾಪಾಡಿ, ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಶ್ರಮಿಸಿ ಎಂದರು.

ಅರಣ್ಯ ಕಾಯಿದೆ ಅಡಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ ತೀರ್ಪು ನೀಡುವ ಅಧಿಕಾರವೂ ನಿಮಗೆ ಬರುತ್ತದೆ. ನಿಮ್ಮ ಅಧಿಕಾರ ಬಳಸಿ ಒತ್ತುವರಿ ತೆರವು ಮಾಡಿ, ಜನಸ್ನೇಹಿಯಾಗಿ ಕೆಲಸ ನಿರ್ವಹಿಸಿ ಉತ್ತಮ ಅಧಿಕಾರಿ ಎಂಬ ಹೆಸರು ಗಳಿಸಿ ಎಂದು ಈಶ್ವರ ಖಂಡ್ರೆ ಕಿವಿಮಾತು ಹೇಳಿದರು.

3 ವರ್ಷ ತರಬೇತಿ: ಇಂದು ನೇಮಕಾತಿ ಪತ್ರ ಪಡೆದ ಎ.ಸಿ.ಎಫ್.ಗಳು 2024ರ ಆಗಸ್ಟ್ 21ರಿಂದ 2 ವರ್ಷಗಳ ಕಾಲ ಡೆಹರಾಡೂನ್ ನಲ್ಲಿ ತರಬೇತಿ ಪಡೆಯಲಿದ್ದು ನಂತರ ಒಂದು ವರ್ಷ ರಾಜ್ಯದಲ್ಲಿ ಒ.ಜೆ.ಟಿ. (ಆನ್ ಜಾಬ್ ಟ್ರೈನಿಂಗ್) ಪಡೆಯಲಿದ್ದು, ಇದು ಪ್ರೊಬೇಷನರಿ ಅವಧಿಯಾಗಿರುತ್ತದೆ. ನಂತರ ಅವರಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು.

ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ್ ಮೋದಿ, ಮಾಜಿ ಶಾಸಕ ಎಂ.ಪಿ.ನಾಡಗೌಡ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಸಿ. ರೈ ಮತ್ತಿತರರು ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

36 mins ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

55 mins ago

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಡಾ.ಹೆಚ್.ಸಿ.ಮಹದೇವಪ್ಪ

ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…

2 hours ago

ಬಹುರೂಪಿ ಬಾಬಾ ಸಾಹೇಬ್‌ | ಜ.11 ರಿಂದ 18ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌…

2 hours ago

ಹೊಸ ವರ್ಷಾಚರಣೆ ಸಂಭ್ರಮ : ಅಹಿತಕರ ಘಟನೆ ತಡೆಗೆ ಸಿಎಂ ಸೂಚನೆ

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

5 hours ago