ರಾಜ್ಯ

ನಿಷ್ಠೆ, ದಕ್ಷತೆಯಿಂದ ಅರಣ್ಯ ರಕ್ಷಿಸಲು ಹೋರಾಡಿ: ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಕರೆ

ಬೆಂಗಳೂರು: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿ ನೇರ ನೇಮಕಾತಿಗೊಂಡಿರುವ 16 ಅಭ್ಯರ್ಥಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಪ್ರತಿಜ್ಞಾವಿಧಿ ಬೋಧಿಸಿ ವಿನೂತನವಾಗಿ ನೇಮಕಾತಿ ಪತ್ರ ವಿತರಿಸಿದರು.

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಎ.ಸಿ.ಎಫ್.ಗಳಾಗಿ ನೇಮಕಗೊಂಡಿರುವ 10 ಮಹಿಳಾ ಅಭ್ಯರ್ಥಿಗಳು ಮತ್ತು 6 ಪುರುಷ ಅಭ್ಯರ್ಥಿಗಳಿಗೆ ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿ, ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಎಲ್ಲ ವಿದ್ಯಾವಂತರಿಗೂ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುವ ಅವಕಾಶ ದೊರಕುವುದಿಲ್ಲ. ನೀವೆಲ್ಲರೂ ಪ್ರತಿಭಾವಂತರು ಮತ್ತು ಅದೃಷ್ಟವಂತರಾಗಿದ್ದೀರಿ. ನಿಮಗೆ ಲಭಿಸಿರುವ ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡು ಅರಣ್ಯ ಮತ್ತು ಅರಣ್ಯ ಸಂಪನ್ಮೂಲ ಹಾಗೂ ವನ್ಯಜೀವಿ ಸಂರಕ್ಷಣೆ ಮಾಡುವಂತೆ ಕರೆ ನೀಡಿದರು.

ಇಂದು ಇಡೀ ವಿಶ್ವ ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಂತಹ ಬೃಹತ್ ಸವಾಲು ಎದುರಿಸುತ್ತಿದೆ. ಅರಣ್ಯ ಸಂರಕ್ಷಣೆ ಹಿಂದೆಂದಿಗಿಂತಲೂ ಇಂದು ಅತ್ಯಂತ ಮಹತ್ವದ್ದಾಗಿದೆ. ಈ ಕಾಲಘಟ್ಟದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿರುವ ನೀವು, ಅರಣ್ಯವನ್ನು ಸಂರಕ್ಷಿಸಲು ಇಲಾಖೆಗೆ ಸಹಾಯಕರಾಗಬೇಕು ಎಂದು ಹೇಳಿದರು.

ಸರ್ಕಾರಿ ಕೆಲಸ ದೇವರ ಕೆಲಸ. ಈ ಘೋಷಣೆಯನ್ನು ವಿಧಾನಸೌಧದ ಪ್ರವೇಶ ದ್ವಾರದಲ್ಲೇ ಕೆತ್ತಿಸಲಾಗಿದೆ. ನೀವೆಲ್ಲರೂ ಅರಣ್ಯ ಸಂರಕ್ಷಣೆಯನ್ನು ದೇವರ ಕೆಲಸ ಎಂದು ಮಾಡಿ. ಅರಣ್ಯ ಉಳಿಸಿ, ಪಕ್ಷಿ ಸಂಕುಲ, ಪ್ರಾಣಿ ಸಂಕುಲ ಮತ್ತು ಕೀಟ ಸಂಕುಲ ಉಳಿಸಿ, ಕಾಡನ್ನು ಕಾಪಾಡಿ, ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಶ್ರಮಿಸಿ ಎಂದರು.

ಅರಣ್ಯ ಕಾಯಿದೆ ಅಡಿಯಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ ತೀರ್ಪು ನೀಡುವ ಅಧಿಕಾರವೂ ನಿಮಗೆ ಬರುತ್ತದೆ. ನಿಮ್ಮ ಅಧಿಕಾರ ಬಳಸಿ ಒತ್ತುವರಿ ತೆರವು ಮಾಡಿ, ಜನಸ್ನೇಹಿಯಾಗಿ ಕೆಲಸ ನಿರ್ವಹಿಸಿ ಉತ್ತಮ ಅಧಿಕಾರಿ ಎಂಬ ಹೆಸರು ಗಳಿಸಿ ಎಂದು ಈಶ್ವರ ಖಂಡ್ರೆ ಕಿವಿಮಾತು ಹೇಳಿದರು.

3 ವರ್ಷ ತರಬೇತಿ: ಇಂದು ನೇಮಕಾತಿ ಪತ್ರ ಪಡೆದ ಎ.ಸಿ.ಎಫ್.ಗಳು 2024ರ ಆಗಸ್ಟ್ 21ರಿಂದ 2 ವರ್ಷಗಳ ಕಾಲ ಡೆಹರಾಡೂನ್ ನಲ್ಲಿ ತರಬೇತಿ ಪಡೆಯಲಿದ್ದು ನಂತರ ಒಂದು ವರ್ಷ ರಾಜ್ಯದಲ್ಲಿ ಒ.ಜೆ.ಟಿ. (ಆನ್ ಜಾಬ್ ಟ್ರೈನಿಂಗ್) ಪಡೆಯಲಿದ್ದು, ಇದು ಪ್ರೊಬೇಷನರಿ ಅವಧಿಯಾಗಿರುತ್ತದೆ. ನಂತರ ಅವರಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು.

ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ್ ಮೋದಿ, ಮಾಜಿ ಶಾಸಕ ಎಂ.ಪಿ.ನಾಡಗೌಡ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಸಿ. ರೈ ಮತ್ತಿತರರು ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago