ರಾಜ್ಯ

ಎಚ್ಎಂಟಿ ಡಿನೋಟಿಫಿಕೇಷನ್ : ಗೋಕುಲ್ ಅಮಾನತಿಗೆ ಖಂಡ್ರೆ ಸಮರ್ಥನೆ

ಬೆಂಗಳೂರು : ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅಂದಿನ ಅರಣ್ಯ ಸಚಿವರ ಮತ್ತು ಸಚಿವ ಸಂಪುಟದ ಅನುಮತಿ ಇಲ್ಲದೆ ಅರ್ಜಿ ಸಲ್ಲಿಸಿರುವ ಐ.ಎಫ್.ಎಸ್. ಅಧಿಕಾರಿ ಆರ್.ಗೋಕುಲ್ ಅಮಾನತನ್ನು ಸಚಿವ ಈಶ್ವರ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ಸಾವಿರ ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ಇಂದಿಗೂ 280 ಎಕರೆಯಷ್ಟು ಅರಣ್ಯವಿದೆ. ಆದರೆ ಇದು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂಕೋರ್ಟ್ ಗೆ ಸುಳ್ಳು ಪ್ರಮಾಣಪತ್ರ ನೀಡಿದ ಅಧಿಕಾರಿಗಳ ನಡೆ, ಕಾನೂನು ಬಾಹಿರವಾಗಿದ್ದು, ಇದು ಸರ್ಕಾರಕ್ಕೆ, 7 ಕೋಟಿ ಜನರಿಗೆ ಮಾಡಿದ ಅಪಚಾರ ಮತ್ತು ದ್ರೋಹ. ಹೀಗಾಗಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿದೆ. ಇದಕ್ಕೆ ಯಾರಾದರೂ ವಿರೋಧ ವ್ಯಕ್ತಪಡಿಸಿದರೆ, ಅದು ರಾಜ್ಯಕ್ಕೆ ಮಾಡುವ ದ್ರೋಹ ಎಂದರು.

ಬನ್ನೇರುಘಟ್ಟದಲ್ಲಿ ಪ್ರಥಮ ಇ.ವಿ. ಸಫಾರಿ ಬಸ್:
ವಾಹನಗಳಿಂದ ಹೆಚ್ಚುತ್ತಿರುವ ಇಂಗಾಲದ ಹೊರಹೊಮ್ಮುವಿಕೆ ತಡೆಯಲು ಇಲಾಖೆ ಪ್ರಯತ್ನಶೀಲವಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಬನ್ನೇರುಘಟ್ಟ ಸಫಾರಿಯಲ್ಲಿ ಹೊಗೆ ರಹಿತ ಇ.ವಿ. – ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ನಾಳೆ ಈ ವಾಹನಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ ಅವರು, ನಾಳೆ ಸಚಿವ ಸಂಪುಟದ ಸಭೆ ಇದ್ದು, ಕೇರಳ ರಾಜ್ಯದ ಅರಣ್ಯ ಸಚಿವರು ಭೇಟಿಯಾಗಲು ಬರುತ್ತಿರುವ ಹಿನ್ನೆಲೆಯಲ್ಲಿ ಈ ವಾರಾಂತ್ಯದೊಳಗೆ ಇ.ವಿ. ಸಫಾರಿ ವಾಹನಕ್ಕೆ ಚಾಲನೆ ನೀಡುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

35 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

39 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

46 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

53 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

58 mins ago