ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಸಲ್ಲಿಸಿದ್ದರೆ, ಅಂತಹ ಅರ್ಜಿಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಈಶ್ವರ ಬಿ.ಖಂಡ್ರೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.2) ಈ ವಿಚಾರಕ್ಕೆ ಸಂಬಂಧಿಸಿದಂತೆ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ ಅವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದರು.
ಅರಣ್ಯ ಹಕ್ಕು ಕಾಯಿದೆ ಅಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗಾಗಿ ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲೀಕತ್ವ ಹೊಂದಿರುವವರೂ ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮ ವಹಿಸಬೇಕು ಎಂದು ಹೇಳಿದರು.
ಇನ್ನೂ ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ಮತ್ತು ‘ನಮೂನೆ-ಎ’ಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಬೇಕು ಎಂದು ತಿಳಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…