ರಾಜ್ಯ

ಐಟಿ, ಇಡಿಯನ್ನು ಬಿಜೆಪಿ ಮೋರ್ಚಾ ಮಾಡಿಕೊಂಡಿದೆ : ಈಶ್ವರ ಖಂಡ್ರೆ

ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷಗಳಷ್ಟು ಹಳೆಯದಾಗಿತ್ತು, ನಂತರ ಸಾಕಷ್ಟು ಬದಲಾವಣೆ ಆಗಿದೆ ಎಂಬುದು ಜನರ ಅಭಿಪ್ರಾಯವಾಗಿತ್ತು. ಇದಕ್ಕೆ ಅನುಗುಣವಾಗಿ ನ್ಯೂನತೆಗಳನ್ನು ಸರಿಪಡಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ ಎಲ್ಲ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಒದಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈಗ ಪ್ರತಿಪಕ್ಷಗಳು ಸರ್ಕಾರದ ನಿರ್ಧಾರ ಟೀಕಿಸುತ್ತಿವೆ. ಬಿಜೆಪಿ 5 ವರ್ಷ ಅಧಿಕಾರದಲ್ಲಿತ್ತು. ಆಗ ಏಕೆ ಯಾವುದೇ ತೀರ್ಮಾನ ಕೈಗೊಳ್ಳಲಿಲ್ಲ ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದರು.

ಸ್ವಾಯತ್ತ ಸಂಸ್ಥೆಗಳ ದುರುಪಯೋಗ:
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇ.ಡಿ., ಐ.ಟಿ., ಸಿಬಿಐನಂತಹ ಸ್ವಾಯತ್ತ ಸಂಸ್ಥೆಗಳನ್ನು ರಾಜಕೀಯ ದುರುದ್ದೇಶಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಜಗಜ್ಜಾಹೀರಾಗಿದೆ. ನ್ಯಾಯಾಲಯಗಳು ಕೂಡ ಹಲವು ಬಾರಿ ಎಚ್ಚರಿಕೆ ನೀಡಿವೆ ಎಂದರು.

ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿಯು ತನ್ನ ಒಂದು ಮೋರ್ಚಾದಂತೆ ವರ್ತಿಸುವಂತೆ ಮಾಡಿದೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

51 mins ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

1 hour ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

4 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

5 hours ago