ರಾಜ್ಯ

ವನ್ಯ ಜೀವಿ ವಿಭಾಗದ ಮಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ : ಈಶ್ವರ ಖಂಡ್ರೆ

ಬೆಂಗಳೂರು: ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶನಿವಾರ (ಜು.27) ತಿಳಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500, ಅರಣ್ಯ ರಕ್ಷಕರಿಗೆ 2700 ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

ರಾಜ್ಯದ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಇದರ ನಿಗ್ರಹಕ್ಕಾಗಿ ಆನೆ ಕಾರ್ಯಪಡೆ ರಚಿಸಲಾಗಿದ್ದು, ಇದರಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ ತಿಂಗಳಿಗೆ ಗರಿಷ್ಠ 2000 ರೂ. (ಷರತ್ತಿಗೆ ಒಳಪಟ್ಟು) ನೀಡಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ. ನರಸೀಪುರ, ಮಂಡ್ಯ, ಪಾಂಡವಪುರ, ನಾಗಮಂಗಲ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿರತೆ ಕಾರ್ಯಪಡೆ, ವನ್ಯ ಜೀವಿಗಳನ್ನು ಹಿಮ್ಮೆಟ್ಟಿಸುವ ಕ್ಷಿಪ್ರ ಸ್ಪಂದನಾ ಪಡೆ ಸಿಬ್ಬಂದಿ ಮತ್ತು ಅರಣ್ಯದೊಳಗಿರುವ ಕಳ್ಳಬೇಟೆ ಶಿಬಿರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಹೊರಗುತ್ತಿಗೆ ನೌಕರರಿಗೂ ಇದು ಅನ್ವಯಿಸುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತಾವು ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿ ಮತ್ತು ಹೊರಗುತ್ತಿಗೆ ನೌಕರರು ಚಳಿ, ಮಳೆ, ಗಾಳಿ ಎನ್ನದೆ, ವನ್ಯಜೀವಿಗಳ ದಾಳಿಯ ಅಪಾಯದ ನಡುವೆಯೂ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವುದನ್ನು ಗಮನಿಸಿ, ಈ ವಿಶೇಷ ಭತ್ಯೆ ನೀಡಲು ತೀರ್ಮಾನಿಸಿದ್ದಾಗಿ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

6 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

7 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

9 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago