ಬೀದರ್: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಡ್ರೋನ್ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಬೀದರ್ನಲ್ಲಿ ಇಂದು(ಡಿಸೆಂಬರ್.31) ಈ ಕುರಿತು ಮಾದ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇನ್ಫೋಸಿಸ್ ಕ್ಯಾಂಪಸ್ ಸುತ್ತ ಚಿರತೆ ಓಡಾಡಿರುವುದು ಸಿಸಿ ಕ್ಯಾಮರಾದ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಹೀಗಾಗಿ ತುರ್ತು ಕಾರ್ಯಚರಣೆ ನಡೆಸಿ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ಈ ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಚಿರತೆ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಕಾಣಿಸಿಕೊಂಡ ನಂತರ ಎಚ್ಚೆತ್ತ ಸಂಸ್ಥೆಯೂ ಮುನ್ನಚ್ಚೆರಿಕೆ ಕ್ರಮವಾಗಿ ಸಿಬ್ಬಂದಿಗಳಿಗೆ ರಜೆಯನ್ನು ಘೋಷಿಸಿ, ಉದ್ಯೋಗಿಗಳಿಗೆ ಮನೆಯಲ್ಲೇ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಬಳಸಲಾಗುತ್ತಿದ್ದು ಬಲೆ, ಅರವಳಿಕೆ ಔಷಧದೊಂದಿಗೆ ಚಿರತೆ ಸೆರೆಗೆ ಸಜ್ಜಾಗಿದ್ದಾರೆ. ಅಲ್ಲದೇ ಶೀಘ್ರವೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯಲಿದ್ದಾರೆ ಎಂದು ಹೇಳಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…