ರಾಜ್ಯ

ಸಿಎಂ ಸಿದ್ದರಾಮಯ್ಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಈಶ್ವರಪ್ಪ: ಯಾಕೆ ಗೊತ್ತಾ?

ಶಿವಮೊಗ್ಗ: ಪ್ರತ್ಯೇಕ ದಕ್ಷಿಣ ಭಾರತ ದೇಶದ ಬಗ್ಗೆ ಸಂಸದ ಡಿಕೆ ಸುರೇಶ್‌ ಮಾತಾಡಿರುವುದನ್ನು ಸಿದ್ದರಾಮಯ್ಯ ಒಪ್ಪಿಲ್ಲ, ಅವರ ನಿಲುವನ್ನು ತಾನು ಸ್ವಾಗತಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಗರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತಾಡಿದ ಮಾಜಿ ಸಚಿವ, ಡಿಕೆ ಸುರೇಶ್ ಮತ್ತು ಡಿಕೆ ಶಿವಕುಮಾರ್ ಜಿನ್ನಾ ಸಂಸ್ಕೃತಿಯ ಪ್ರತಿಪಾದಕರಾಗಿದ್ದಾರೆ, ಭಾರತ ಎರಡು ಹೋಳಾಗಿ ಹಿಂದೂಸ್ತಾನ-ಪಾಕಿಸ್ತಾನ ಅಗಿದ್ದು ಅವರಿಗೆ ಸಮಾಧಾನವಾಗಿಲ್ಲ, ಭಾರತೀಯರೆಲ್ಲ ಇನ್ನೂ ಆ ನೋವಿನಿಂದ ಹೊರಬಂದಿಲ್ಲ, ಅದರೆ ಇವರು ದೇಶವನ್ನು ಮತ್ತಷ್ಟು ಒಡೆಯುವ ಹುನ್ನಾರ ಮಾಡಿದಂತಿದೆ ಎಂದು ಈಶ್ವರಪ್ಪ ಹೇಳಿದರು.

ಸಿದ್ದರಾಮಯ್ಯ ಅವರು ಸುರೇಶ್ ಹೇಳಿರುವುದನ್ನು ಒಪ್ಪಿಲ್ಲ ಓಕೆ; ಅದರೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಸೋನಿಯ ಗಾಂಧಿ ಏನು ಹೇಳುತ್ತಾರೆ ಅನೋದು ಬಹಳ ಮುಖ್ಯ, ಅವರ ಅಭಿಪ್ರಾಯಗಳನ್ನು ದೇಶದ ಮುಂದೆ ಇಡಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.

andolanait

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

1 hour ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

2 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

2 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

3 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

3 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

4 hours ago