ಶಿವಮೊಗ್ಗ: ಪ್ರತ್ಯೇಕ ದಕ್ಷಿಣ ಭಾರತ ದೇಶದ ಬಗ್ಗೆ ಸಂಸದ ಡಿಕೆ ಸುರೇಶ್ ಮಾತಾಡಿರುವುದನ್ನು ಸಿದ್ದರಾಮಯ್ಯ ಒಪ್ಪಿಲ್ಲ, ಅವರ ನಿಲುವನ್ನು ತಾನು ಸ್ವಾಗತಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತಾಡಿದ ಮಾಜಿ ಸಚಿವ, ಡಿಕೆ ಸುರೇಶ್ ಮತ್ತು ಡಿಕೆ ಶಿವಕುಮಾರ್ ಜಿನ್ನಾ ಸಂಸ್ಕೃತಿಯ ಪ್ರತಿಪಾದಕರಾಗಿದ್ದಾರೆ, ಭಾರತ ಎರಡು ಹೋಳಾಗಿ ಹಿಂದೂಸ್ತಾನ-ಪಾಕಿಸ್ತಾನ ಅಗಿದ್ದು ಅವರಿಗೆ ಸಮಾಧಾನವಾಗಿಲ್ಲ, ಭಾರತೀಯರೆಲ್ಲ ಇನ್ನೂ ಆ ನೋವಿನಿಂದ ಹೊರಬಂದಿಲ್ಲ, ಅದರೆ ಇವರು ದೇಶವನ್ನು ಮತ್ತಷ್ಟು ಒಡೆಯುವ ಹುನ್ನಾರ ಮಾಡಿದಂತಿದೆ ಎಂದು ಈಶ್ವರಪ್ಪ ಹೇಳಿದರು.
ಸಿದ್ದರಾಮಯ್ಯ ಅವರು ಸುರೇಶ್ ಹೇಳಿರುವುದನ್ನು ಒಪ್ಪಿಲ್ಲ ಓಕೆ; ಅದರೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಸೋನಿಯ ಗಾಂಧಿ ಏನು ಹೇಳುತ್ತಾರೆ ಅನೋದು ಬಹಳ ಮುಖ್ಯ, ಅವರ ಅಭಿಪ್ರಾಯಗಳನ್ನು ದೇಶದ ಮುಂದೆ ಇಡಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…
ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…