ಶಿವಮೊಗ್ಗ: ಪ್ರತ್ಯೇಕ ದಕ್ಷಿಣ ಭಾರತ ದೇಶದ ಬಗ್ಗೆ ಸಂಸದ ಡಿಕೆ ಸುರೇಶ್ ಮಾತಾಡಿರುವುದನ್ನು ಸಿದ್ದರಾಮಯ್ಯ ಒಪ್ಪಿಲ್ಲ, ಅವರ ನಿಲುವನ್ನು ತಾನು ಸ್ವಾಗತಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿ ನಡೆಸಿ ಮಾತಾಡಿದ ಮಾಜಿ ಸಚಿವ, ಡಿಕೆ ಸುರೇಶ್ ಮತ್ತು ಡಿಕೆ ಶಿವಕುಮಾರ್ ಜಿನ್ನಾ ಸಂಸ್ಕೃತಿಯ ಪ್ರತಿಪಾದಕರಾಗಿದ್ದಾರೆ, ಭಾರತ ಎರಡು ಹೋಳಾಗಿ ಹಿಂದೂಸ್ತಾನ-ಪಾಕಿಸ್ತಾನ ಅಗಿದ್ದು ಅವರಿಗೆ ಸಮಾಧಾನವಾಗಿಲ್ಲ, ಭಾರತೀಯರೆಲ್ಲ ಇನ್ನೂ ಆ ನೋವಿನಿಂದ ಹೊರಬಂದಿಲ್ಲ, ಅದರೆ ಇವರು ದೇಶವನ್ನು ಮತ್ತಷ್ಟು ಒಡೆಯುವ ಹುನ್ನಾರ ಮಾಡಿದಂತಿದೆ ಎಂದು ಈಶ್ವರಪ್ಪ ಹೇಳಿದರು.
ಸಿದ್ದರಾಮಯ್ಯ ಅವರು ಸುರೇಶ್ ಹೇಳಿರುವುದನ್ನು ಒಪ್ಪಿಲ್ಲ ಓಕೆ; ಅದರೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಸೋನಿಯ ಗಾಂಧಿ ಏನು ಹೇಳುತ್ತಾರೆ ಅನೋದು ಬಹಳ ಮುಖ್ಯ, ಅವರ ಅಭಿಪ್ರಾಯಗಳನ್ನು ದೇಶದ ಮುಂದೆ ಇಡಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…