ರಾಜ್ಯ

ನನ್ನ ಜೀವ ಇರೋದೆ ಬಿಜೆಪಿಯಲ್ಲಿ ಎಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಬಳ್ಳಾರಿ: ಬಿಜೆಪಿ ಬಿಟ್ಟು ನಾನೆಲ್ಲಿ ಹೋಗಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ವಾಪಸ್‌ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬಳ್ಳಾರಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು, ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಬೆಂಗಳೂರಿನಲ್ಲಿ ನಿನನೆ ಬಿಜೆಪಿ ಕುರುಬ ಸಮಾಜದ ಮುಖಂಡರ ಸಭೆ ನಡೆದಿದೆ. ನನ್ನ ಮೇಲಿನ ಪ್ರೀತಿ, ವಿಶ್ವಾಸದಿಂದ ಅವರು ಮಾತನಾಡಿದ್ದಾರೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯನ್ನು ಬಿಟ್ಟು ನಾನೆಲ್ಲಿ ಹೋಗಲಿ? ನನ್ನ ಜೀವ ಇರುವುದೇ ಬಿಜೆಪಿಯಲ್ಲಿ ಎಂದು ಹೇಳಿದರು.

ಇನ್ನು ನನಗೆ ಬೇರೆ ಪಕ್ಷಗಳಿಂದಲೂ ಆಫರ್‌ ಬಂದಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಅವರು ಕೂಡ ಕರೆದಿದ್ದರು. ಸಿದ್ದರಾಮಯ್ಯ ಸಂಪುಟದ ಸಚಿವರು ಕೂಡ ನನ್ನನ್ನು ಕರೆದಿದ್ದರು. ನಾನು, ಯಡಿಯೂರಪ್ಪ, ಅನಂತ ಕುಮಾರ್‌ ಸೇರಿ ಪಕ್ಷ ಕಟ್ಟಿದ್ದೇವೆ. ಅದಕ್ಕಿಂತ ಮೊದಲು ಅನೇಕರು ಪಕ್ಷಕ್ಕಾಗಿ ರಕ್ತ ಸುರಿದಿದ್ದಾರೆ. ನಾನು ಬಿಜೆಪಿ ಬಿಟ್ಟು ಯಾವ ಪಕ್ಷಕ್ಕೂ ಹೋಗಲ್ಲ ಎಂದು ವಾಪಸ್‌ ಪಕ್ಷ ಸೇರುವ ಬಗ್ಗೆ ಈಶ್ವರಪ್ಪ ಇಂಗಿತ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

42 mins ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

1 hour ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

1 hour ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

2 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

2 hours ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

12 hours ago