ರಾಜ್ಯ

ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆ

ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ ಕೇಂದ್ರ ಸಚಿವ ಜೆಪಿ ನಡ್ಡಾಗೆ ಮನವಿ ಸಲ್ಲಿಸಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು : ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯು ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ (ಕೆಎಂಐಒ) ದೇಶದಲ್ಲೇ ಮೊದಲ ಬಾರಿಗೆ ಪ್ರೋಟಾನ್ ಚಿಕಿತ್ಸಾ ಸೌಲಭ್ಯವನ್ನು ಸ್ಥಾಪಿಸಲು ಮುಂದಾಗಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್‌ ಅವರ ದೂರದೃಷ್ಟಿಯೊಂದಿಗೆ ಈ ಚಿಕಿತ್ಸಾ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರೊಂದಿಗಿನ ಸಭೆಯಲ್ಲಿ ಈ ಸುಧಾರಿತ ಚಿಕಿತ್ಸಾ ಸೌಲಭ್ಯವನ್ನು ಕಿದ್ವಾಯಿ ಸಂಸ್ಥೆಯಲ್ಲಿ ಸ್ಥಾಪಿಸಲು ಕೇಂದ್ರದಿಂದ 500 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆಯನ್ನು ಸಲ್ಲಿಸಿದರು.

ಭಾರತದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಒಂದಾದ ಕೆಎಂಐಒದಲ್ಲಿ ವಾರ್ಷಿಕವಾಗಿ 21,000 ಕ್ಕೂ ಹೆಚ್ಚು ಹೊಸ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿದೆ. ವಿಕಿರಣ ಚಿಕಿತ್ಸೆಯಲ್ಲಿ ಗೆಡ್ಡೆಯ ಅಕ್ಕಪಕ್ಕದ ಭಾಗಗಳಿಗೂ ಪರಿಣಾಮವಾಗುವ ಸಾಧ್ಯತೆ ಇರುತ್ತದೆ. ಆದರೆ ಸುಧಾರಿತ ರೂಪವಾದ ಪ್ರೋಟಾನ್ ಚಿಕಿತ್ಸೆಯು ಗೆಡ್ಡೆಯ ಬಳಿ ನಿರ್ಣಾಯಕ ಅಂಗಗಳಿಗೆ ಯಾವುದೇ ರೀತಿಯ ಹಾನಿ ಮಾಡುವುದಿಲ್ಲ. ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿದೀರ್ಘಕಾಲೀನ ಅಡ್ಡಪರಿಣಾಮಗಳನ್ನು ಕಡಿಮೆ ಮಾಡುತ್ತದೆ.

ಗಾಮಾ ಕಿರಣಗಳು ಅಥವಾ ಎಕ್ಸ್-ಕಿರಣಗಳನ್ನು ಬಳಸುವುದು ಸಾಂಪ್ರದಾಯಿಕ ರೇಡಿಯೊ ಥೆರಪಿಗಿಂತ ಭಿನ್ನವಾಗಿರುತ್ತದೆ. ಪ್ರೋಟಾನ್ ಚಿಕಿತ್ಸೆಯು ನಿಖರವಾಗಿ ಸಮಸ್ಯೆ ಇರುವ ಜಾಗಕ್ಕೆ ಮಾತ್ರ ಚಿಕಿತ್ಸೆ ಒದಗಿಸುತ್ತದೆ. ಇದರಿಂದ ಹಾನಿ ಪ್ರಮಾಣ ಕಡಿಮೆ ಎಂದು ಡಾ. ಪಾಟೀಲ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ಪ್ರಸ್ತಾವನೆಯು ಮಕ್ಕಳ ಕ್ಯಾನ್ಸರ್‌ ಪ್ರಕರಣಗಳು, ವಿಶೇಷವಾಗಿ NF-1 ಮತ್ತು ರೆಟಿನೋಬ್ಲಾಸ್ಟೊಮಾದಂತಹ ಆನುವಂಶಿಕ ಪ್ರಕಾರಗಳು ಮತ್ತು ಕಣ್ಣು, ಕಕ್ಷೆ, ತಲೆಬುರುಡೆಯ ಬುಡ, ಬೆನ್ನುಮೂಳೆ, ಯಕೃತ್ತು, ಪ್ರಾಸ್ಟೇಟ್, ಸ್ತನ, ತಲೆ ಮತ್ತು ಕುತ್ತಿಗೆ ಮತ್ತು ಪ್ಯಾರಾನಾಸಲ್ ಸೈನಸ್‌ಗಳ ಕ್ಯಾನ್ಸರ್‌ಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಇತರ ಮಾರಕ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತದೆ. ಮರು-ವಿಕಿರಣ ಪ್ರಕರಣಗಳು ಮತ್ತು ತೆಗೆದುಹಾಕಲಾಗದ ಗೆಡ್ಡೆಗಳ ಪ್ರಕರಣಗಳಿಗೂ ಬಳಸಬಹುದಾಗಿದೆ. ಇದರಿಂದ ವಾಸಿಯಾಗುವ ಭರವಸೆ ಹೆಚ್ಚಾಗಿರುತ್ತದೆ ಎಂದು ಸಚಿವ ಡಾ. ಪಾಟೀಲ್‌ ವಿವರಿಸಿದ್ದಾರೆ.

ಪ್ರೋಟಾನ್ ಚಿಕಿತ್ಸೆಯ ಪ್ರಮುಖ ಪ್ರಯೋಜನಗಳು ಮಕ್ಕಳ ಮತ್ತು ಆನುವಂಶಿಕ ಗೆಡ್ಡೆಗಳಿಗೆ ಹೆಚ್ಚು ಪರಿಣಾಮಕಾರಿ
ಚಿಕಿತ್ಸೆಯ ನಂತರ ವೇಗವರ್ಧಿತ ಚೇತರಿಕೆ  ದ್ವಿತೀಯಕ ಕ್ಯಾನ್ಸರ್‌ಗಳ ಸಾಧ್ಯತೆ ಕಡಿಮೆ ದೀರ್ಘಾವಧಿಯ ಬದುಕುಳಿಯುವಿಕೆ

2025 ರ ವೇಳೆಗೆ ಭಾರತದಲ್ಲಿ 1.2 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಪ್ರೋಟಾನ್ ಚಿಕಿತ್ಸೆಯ ಅಗತ್ಯವಿರಬಹುದು ಎಂದು ಅಂದಾಜಿಸಲಾಗಿದೆ. KMIO ನಲ್ಲಿರುವ ಈ ಸೌಲಭ್ಯವು ಅತ್ಯಾಧುನಿಕ ಕ್ಯಾನ್ಸರ್ ಆರೈಕೆಯನ್ನು ಒದಗಿಸುವುದಲ್ಲದೆ, NIMHANS ಮತ್ತು ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಿಂದ ಉಲ್ಲೇಖಿತ ಪ್ರಕರಣಗಳಿಗೂ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ.
ಡಾ. ಶರಣ್ ಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ

ಆಂದೋಲನ ಡೆಸ್ಕ್

Recent Posts

ಅಧ್ಯಾಯ ಎರಡು ಇಲ್ಲಿಂದು ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

43 mins ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

51 mins ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

1 hour ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

1 hour ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

12 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

12 hours ago