ರಾಜ್ಯ

ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ : ಎಂಎಲ್‌ಸಿ ಕೆ. ಶಿವಕುಮಾರ್‌ ಘೋಷಣೆ

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಶಿವಕುಮಾರ್‌ ಅವರು ಘೋಷಿಸಿದರು.

ಅವರು ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ತಾವು ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್.‌ ಅಂಬೇಡ್ಕರ್‌ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರು ನಿಷ್ಪಕ್ಷಪಾತಿ ಪತ್ರಕರ್ತರಾಗಿದ್ದರು. ಅವರು ಸ್ವತಃ ಪತ್ರಕರ್ತರ ವರದಿಗಳನ್ನು ತಿದ್ದಿ , ಮಾರ್ಗದರ್ಶನ ನೀಡುತ್ತಿದ್ದರು ಎಂದು ಸ್ಮರಿಸಿದರು. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಗುರುತಿಸುವ ಸಲುವಾಗಿ 1.5 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು.

ಇದನ್ನು ಓದಿ: ನಾಯಕತ್ವ ಬದಲಾವಣೆ ಹೇಳಿಕೆಗೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ತಾವು ಇನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ. ಸದನದಲ್ಲಿಯೂ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಕುರಿತು ದನಿ ಎತ್ತುವುದಾಗಿ ಅವರು ತಿಳಿಸಿದರು. ತಮ್ಮ ಪತ್ರಕರ್ತ ವೃತ್ತಿ ಜೀವನ ಹಾಗೂ ಅಕಾಡೆಮಿಯ ಸದಸ್ಯರಾಗಿ ಕಾರ್ಯನಿರ್ವಹಣೆಯ ಸಂದರ್ಭಗಳನ್ನು ಮೆಲುಕು ಹಾಕಿದ ಶಿವಕುಮಾರ್‌ ಅವರು ಅಕಾಡೆಮಿಯ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ ಅವರು, ಶಿವಕುಮಾರ್‌ ಅವರು ಮೂರು ದಶಕಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದು, ತಮ್ಮ ನಿಷ್ಠುರ ವರದಿಗಳಿಗಾಗಿ ಹೆಸರುವಾಸಿಯಾಗಿದ್ದಾರೆ. ಅವರು ಇಂದು ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವುದು ಪತ್ರಕರ್ತರಿಗೆಲ್ಲ ಹೆಮ್ಮೆಯ ವಿಷಯ. ಅವರು ಅಕಾಡೆಮಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅವರ ಬೆಂಬಲ ಪತ್ರಕರ್ತರಿಗೆ ಸದಾ ಇರುವುದೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಸದಸ್ಯರಾದ ಕೆ. ನಿಂಗಜ್ಜ, ಕೆ.ವೆಂಕಟೇಶ್‌, ಶಿವಾನಂದ ತಗಡೂರು, ಅಬ್ಬಾಸ್‌ ಮುಲ್ಲಾ ಮೊದಲಾದವರು ಶಿವಕುಮಾರ್‌ ಅವರ ಕುರಿತು ಮಾತನಾಡಿದರು.

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

2 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

2 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

3 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

3 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

4 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

4 hours ago