ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್ ಬೇಕು ಎಂದು ಅನೇಕರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.
ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲಿಸುವಂತೆ ಈ ಹಿಂದೆ ಬಿಎಸ್ವೈ ದೂರಿನ ಮೇರೆಗೆ ಅಮಿತ್ ಶಾ ಅವರು, ನನಗೆ ಸೂಚಿಸಿದ್ದ ಕಾರಣಕ್ಕೆ ಕೈಬಿಟ್ಟಿದ್ದೆ. ಅಂದು ರಾಯಣ್ಣ ಬ್ರಿಗೇಡ್ ಸಂಘಟನೆ ಕೈಬಿಟ್ಟು ತಪ್ಪು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜೀವನದಲ್ಲಿ ಬಿಜೆಪಿ ಬಿಟ್ಟು ಇನ್ಯಾವ ಪಕ್ಷಕ್ಕೂ ಹೋಗಲ್ಲ. ಆದರೆ ಅಪ್ಪ-ಮಕ್ಕಳ ಕಪಿಮುಷ್ಠಿಯಿಂದ ಶುದ್ಧೀಕರಣ ಆಗುವವರೆಗೂ ನಾನು ಬಿಜೆಪಿಗೆ ಹೋಗಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ ಎಂದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…