ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರೀಕ್ಷಾರ್ಥ ಚಾಲನೆ ನೀಡಿದ್ದಾರೆ.
ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮಲೆನಾಡು ಸೇರಿದಂತೆ ಇತರೆ ಕಡೆ ಉತ್ತಮ ಮಳೆಯಾಗುತ್ತಿದೆ. ಮಂಡ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅರ್ಕಾವತಿ ಬಲದಂಡೆ ನಾಲೆ ಏತ ನೀರಾವರಿ ಯೋಜನೆಯನ್ನು ತುರ್ತಾಗಿ ಪುನಶ್ಚೇತನ ಮಾಡಿ ಚಾಲನೆ ನೀಡಿದ್ದೇವೆ ಎಂದು ಮಾಹಿತಿ ನೀಡಿದರು.
ನೀರಾವರಿ ಸಚಿವನಾಗಿರುವ ನನಗೆ ಇಂತಹ ನೂರು ಯೋಜನೆಯನ್ನು ಮಾಡುವ ಶಕ್ತಿಯನ್ನು ದೇವರು ನೀಡಿದ್ದಾನೆ. ಇನ್ನು ಹಲವಾರು ಯೋಜನೆಗಳನ್ನು ಕೈಗೊಳ್ಳಲು ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.
ಮುಂದುವರಿದು ಮಾತನಾಡಿದ ಅವರು, ಈ ಯೋಜನೆಗೆ ರೈತರು ಹತ್ತಾರು ಎಕರೆ ಭೂಮಿಯನ್ನು ಕಳೆದುಕೊಂಡಿದ್ದಾರೆ. ಇದರಿಂದ ನನಗೆ ತುಂಬಾ ಬೇಸರವಾಗಿದೆ. ಆ ರೈತರಿಗೆಲ್ಲಾ ಏನು ಪರಿಹಾರ ಕೊಡಬೇಕೋ ಅದನ್ನು ಕೊಟ್ಟೇ ಕೊಡುತ್ತೇವೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಅನ್ನದಾತರಿಗೆ ಆಶ್ವಾಸನೆ ನೀಡಿದರು.
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…