ಬೆಂಗಳೂರು: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆಶಿ ಅವರನ್ನು ಭಗೀರಥ ಎಂದು ನಾನೇ ಘೋಷಿಸುವೆ ಎಂಬ ಸಂಸದ ಸುಧಾಕರ್ ಸವಾಲನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವೀಕರಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದು ಭಾವಿಸುತ್ತೇನೆ. ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಅವರೂ ಇದ್ದರು. ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ ಎಂದರು.
ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಸುಧಾಕರ್ ಸೇರಿದಂತೆ ಹಲವರು ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ. ಹಾಗಾಗಿ ಅಲ್ಲಿಗೂ ಕೂಡ ನೀರು ತರುತ್ತೇವೆ ಎಂದು ಆಶ್ವಾಸನೆ ನೀಡಿದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…