ಬೆಂಗಳೂರು: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆಶಿ ಅವರನ್ನು ಭಗೀರಥ ಎಂದು ನಾನೇ ಘೋಷಿಸುವೆ ಎಂಬ ಸಂಸದ ಸುಧಾಕರ್ ಸವಾಲನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವೀಕರಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದು ನನ್ನ ಜವಾಬ್ದಾರಿ ಹಾಗೂ ಸಲಹೆ ಎಂದು ಭಾವಿಸುತ್ತೇನೆ. ಎತ್ತಿನಹೊಳೆ ಭೂಮಿ ಪೂಜೆಯಲ್ಲಿ ಅವರೂ ಇದ್ದರು. ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ನೀರು ದೊರೆಯಲಿ ಎಂಬುದು ಅವರ ಆಸೆ. ಅವರ ಆಸೆ ಈಡೇರಿಸುವ ಕೆಲಸ ಮಾಡೋಣ ಎಂದರು.
ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಸುಧಾಕರ್ ಸೇರಿದಂತೆ ಹಲವರು ಹೋರಾಟ ಮಾಡಿದ್ದಾರೆ. ಕೋಲಾರ ಭಾಗದ ಜನರ ನೀರಿನ ಸಂಕಷ್ಟ ನನಗೆ ಅರಿವಿದೆ. ಹಾಗಾಗಿ ಅಲ್ಲಿಗೂ ಕೂಡ ನೀರು ತರುತ್ತೇವೆ ಎಂದು ಆಶ್ವಾಸನೆ ನೀಡಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…