ರಾಜ್ಯ

ದೇಶದ ಪ್ರಥಮ ಸೌರಶಕ್ತಿ ಸೆಕೆಂಡ್ ಲೈಫ್ ಬ್ಯಾಟರಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ

*ವಿದ್ಯುತ್ ವಾಹನ ಮೂಲ ಸೌಕರ್ಯ, ಸುಸ್ಥಿರ ಇಂಧನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ
*ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ ಏಕಕಾಲದಲ್ಲಿ 23 ವಾಹನಗಳ ಚಾರ್ಜಿಂಗ್ ವ್ಯವಸ್ಥೆ

ಬೆಂಗಳೂರು : ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ ಇಂಧನ ಬಳಕೆಯ ಮಾದರಿಯಲ್ಲೂ ನಮ್ಮದೇ ಮೊದಲ ಹೆಜ್ಜೆಯಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದ ಬಳಿ ಬೆಸ್ಕಾಂ ಸ್ಥಾಪಿಸಿರುವ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ಸೆಕೆಂಡ್ ಲೈಫ್ ಬ್ಯಾಟರಿ ಇವಿ ಚಾರ್ಜಿಂಗ್ ಕೇಂದ್ರವನ್ನು ಸೋಮವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ರಾಜ್ಯದಲ್ಲಿ ಹೆಚ್ಚುತ್ತಿರುವ ಇವಿ ಬೇಡಿಕೆಗೆ ಅನುಕೂಲವಾಗುವಂತೆ ಚಾರ್ಜಿಂಗ್ ಕೇಂದ್ರಗಳು ಹಾಗೂ ಮೂಲ ಸೌಕರ್ಯ ಅಭಿವೃದ್ದಿಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಬದ್ಧವಾಗಿದೆ. ಅಲ್ಲದೇ, ಇದಕ್ಕೆ ನಮ್ಮ ರಾಜ್ಯದ ‘ಇವಿ ನೀತಿ’ ಹೆಚ್ಚಿನ ಬಲ ತುಂಬಿದೆ. ಇದೀಗ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಲಾಗಿದ್ದು, ಇದರಿಂದ ಕ್ಯಾಬ್‌ ಚಾಲಕರು, ಇವಿ ಬಳಕೆ ಮಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲವಾಗಲಿದೆ,”ಎಂದರು.

“ಬೆಸ್ಕಾಂ, ಜರ್ಮನ್ ಕಾರ್ಪೊರೇಷನ್ ಫಾರ್ ಇಂಟರ್‌ನ್ಯಾಷನಲ್ ಕೋ ಆಪರೇಷನ್ (ಜಿ.ಐ.ಝಡ್.) ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ 23 ವಾಹನಗಳನ್ನು ಏಕಕಾಲದಲ್ಲಿ ಚಾರ್ಜ್ ಮಾಡಬಹುದಾಗಿದೆ. ಈ ಸ್ಟೇಷನ್‌ನಲ್ಲಿ ಸೌರ ವಿದ್ಯುತ್ತನ್ನು ಹಳೆಯ ಕಾರ್ ಬ್ಯಾಟರಿಗಳಲ್ಲಿ ಶೇಖರಣೆ ಮಾಡಲಾಗುತ್ತದೆ. ಹಗಲಿನಲ್ಲಿ ಸೋಲಾರ್‌ ವಿದ್ಯುತ್‌ ಉತ್ಪಾದಿಸಿ ಅದನ್ನು ಬ್ಯಾಟರಿ ವ್ಯವಸ್ಥೆಯ ಸಹಾಯದಿಂದ ದಿನದ 24 ಗಂಟೆಯೂ ಇವಿ ವಾಹನಗಳಿಗೆ ಸರಬರಾಜು ಮಾಡಲಾಗುತ್ತದೆ,” ಎಂದು ಇಂಧನ ಸಚಿವರು ತಿಳಿಸಿದರು.

“ದೇಶದಲ್ಲೇ ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಒಟ್ಟು 5,880 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಈ ವರ್ಷ ಹೊಸದಾಗಿ 140 ಚಾರ್ಜರ್‌ಗಳನ್ನು ಅಳವಡಿಸಲಾಗಿದೆ ” ಎಂದು ವಿವರಿಸಿದರು.

ಚಾರ್ಜಿಂಗ್‌ ಸ್ಟೇಷನ್‌ ವಿಶೇಷತೆಗಳೇನು?
ಇವಿ ಹಬ್‌ನ ವಿಶೇಷತೆಯನ್ನು ವಿವರಿಸಿದ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ್‌, “24 ಗಂಟೆಗಳ ಕಾಲ ಇವಿ ಚಾರ್ಜಿಂಗ್‌ ಸೌಲಭ್ಯ ನೀಡುವ ದೇಶದ ಮೊದಲ ಚಾರ್ಜಿಂಗ್‌ ಸ್ಟೇಷನ್‌ ಇದಾಗಿದೆ. ಈ ಹಬ್‌ನಲ್ಲಿ 45 ಕಿ.ವ್ಯಾ. ಸೌರ ವಿದ್ಯುತ್ ವ್ಯವಸ್ಥೆ ಮತ್ತು 100 ಕಿ.ವ್ಯಾ.ಹೆಚ್. ಸೆಕೆಂಡ್-ಲೈಫ್ ಬ್ಯಾಟರಿ ಸಂಗ್ರಹಣೆ ಸಾಮರ್ಥ್ಯ ದೊಂದಿಗೆ ಏಕಕಾಲದಲ್ಲಿ 18 ಫಾಸ್ಟ್ ಚಾರ್ಜಿಂಗ್ ಪಾಯಿಂಟ್‌ಗಳು ಮತ್ತು 5 ಸ್ಲೋ ಚಾರ್ಜಿಂಗ್ ಪಾಯಿಂಟ್‌ಗಳೊಂದಿಗೆ ಒಟ್ಟು 23 ಚಾರ್ಜಿಂಗ್ ಪಾಯಿಂಟ್‌ಗಳಿವೆ. ನಮ್ಮ ಬೆಸ್ಕಾಂ ಕೈಗೆಟುಕುವ ದರದಲ್ಲಿ ಇವಿ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತಿದೆ. ಖಾಸಗಿಯವರ ಚಾರ್ಚಿಂಗ್‌ ದರ ನಮ್ಮ ಸ್ಟೇಷನ್‌ಗೆ ಹೋಲಿಸಿದರೆ 2-3 ಪಟ್ಟು ಹೆಚ್ಚಿದೆ,”ಎಂದು ಮಾಹಿತಿ ನೀಡಿದರು.

ಚಾರ್ಚ್‌ ಮಾಡುವುದು ಹೇಗೆ?
ಬೆಸ್ಕಾಂನ ಇವಿ ಮಿತ್ರ ಅಪ್ಲಿಕೇಷನ್‌ನಲ್ಲಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಸ್ಥಳ, ದರ, ಲಭ್ಯವಿರುವ ಸ್ಲಾಟ್‌ಗಳು ಎಂಬ ಮಾಹಿತಿ ಪಡೆಯಬಹುದು. ಅಥವಾ ಸ್ಟೇಷನ್‌ನಲ್ಲಿರುವ ಕ್ಯೂರ್‌ಕೋಡ್‌ ಸ್ಕ್ಯಾನ್ ಮಾಡಿ, ವಾಟ್ಸಪ್‌ಮೂಲಕವೂ ಹಣ ಪಾವತಿಸಿ ಚಾರ್ಜ್‌ ಮಾಡಬಹುದು.
Google Play Store: https://play.google.com/store/apps/details?id=com.bescom.evmithra&pcampaignid=web_share
Apple Play Store:https://apps.apple.com/us/app/bescom-ev-mithra/id6633439725?uo=2

ದರ:
ಎಸಿ-001-ಪ್ರತಿ ಯೂನಿಟ್‌ಗೆ 7.02 ರೂ.
ಡಿಸಿ-001-ಪ್ರತಿ ಯೂನಿಟ್‌ಗೆ 7.16 ರೂ.
ಸಿಸಿಎಸ್‌-2-ಪ್ರತಿ ಯೂನಿಟ್‌ಗೆ 7.83 ರೂ.

ಆಂದೋಲನ ಡೆಸ್ಕ್

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

4 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

5 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

5 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

6 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

6 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

8 hours ago