ರಾಜ್ಯ

ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ: ಮಹಾಂತೇಶ ಬೀಳಗಿ

ಬೆಂಗಳೂರು: ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಬೆಸ್ಕಾಂ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, “ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನಿರ್ದೇಶನದಂತೆ ಸಚಿವಾಲಯದ ನೌಕರಿಗಾಗಿಯೇ 2025ರ ಜನವರಿಯಲ್ಲಿ ವಿಶೇಷ ಇವಿ ಮೇಳ ಆಯೋಜಿಸಲಾಗುವುದು. ಇಂಧನ ಸಚಿವ ಕೆ.ಜೆ.ಜಾರ್ಜ್‌, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಅವರ ಮಾರ್ಗದರ್ಶನದಲ್ಲಿ ಮೇಳ ನಡೆಯಲಿದೆ” ಎಂದರು.

“ಇವಿ ದ್ವಿಚಕ್ರ ವಾಹನ ಬಳಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಇವಿ ವಾಹನಗಳ ಬಳಕೆಯ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಜತೆಗೆ ಸರ್ಕಾರಿ ನೌಕರರು, ವಿಶೇಷವಾಗಿ ಸಚಿವಾಲಯ ನೌಕರರಿಗೆ ಮಾರಾಟಗಾರರಿಂದ ರಿಯಾಯ್ತಿ ದರದಲ್ಲಿ ಇವಿ ದ್ವಿಚಕ್ರ ವಾಹನಗಳನ್ನು ಒದಗಿಸುವುದು ಈ ಮೇಳದ ಉದ್ದೇಶವಾಗಿದೆ. ಪ್ರದರ್ಶನ ಸ್ಥಳದಲ್ಲೇ ಪ್ರಾಯೋಗಿಕವಾಗಿ ವಾಹನ ಓಡಿಸಲು ವ್ಯವಸ್ಥೆ ಮಾಡಲಾಗುವುದು” ಎಂದು ಹೇಳಿದರು.

“ಏರುತ್ತಿರುವ ವಾಹನಗಳ ಇಂಧನ ದರ, ನಗರದ ವಾಯುಮಾಲಿನ್ಯ ತಡೆಗೆ ಇವಿ ವಾಹನಗಳ ಬಳಕೆಯೇ ಪರಿಹಾರ. ಇಲೆಕ್ಟ್ರಿಕ್‌ ವಾಹನಗಳಿಗೆ ರಸ್ತೆ ತೆರಿಗೆ ಸಹ ಇರುವುದಿಲ್ಲ. ಸಚಿವಾಯ ನೌಕರರಿಗೆ ಡೌನ್‌ಪೇಮೆಂಟ್‌ ಇಲ್ಲದೇ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವೂ ದೊರೆಯಲಿದೆ. ಮೇಳದಲ್ಲಿ ಭಾಗವಹಿಸಲು ಇವಿ ಸಂಸ್ಥೆಗಳು ಆಸಕ್ತಿ ತೋರಿದ್ದು, ಈ ಮಾರಾಟ ಕೇವಲ ಮೇಳಕ್ಕೆ ಸೀಮಿತವಾಗಿರದೇ ಮುಂದಿನ ದಿನಗಳಲ್ಲೂ ವಿಶೇಷ ಮಾರಾಟ ಮುಂದುವರಿಸಲಿದ್ದಾರೆ” ಎಂದು ವಿವರಿಸಿದರು.

“ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಇಂಧನ ಇಲಾಖೆ ಅಗತ್ಯ ಮೂಲ ಸೌಕರ್ಯ ಒದಗಿಸಿದೆ. ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿರುವುದನ್ನು ಸ್ಮರಿಸಬಹುದು. ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇವಿ ವಾಹನಗಳ ಬಳಕೆದಾರರು ಚಾರ್ಚಿಂಗ್ ಸ್ಟೇಷನ್‌ ಹಾಗೂ ಇವಿ ಮಿತ್ರ ಆ್ಯಪ್‌ ಪ್ರಯೋಜನ ಪಡೆಯುವಂತೆ ವಿನಂತಿಸುತ್ತೇನೆ” ಎಂದರು.

ವಿಶೇಷ ಇವಿ ಮೇಳ ಆಯೋಜಿಸುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್‌ ಸಂಗಾ, ಮೇಳಕ್ಕೆ ಸಂಘದ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ಸಭೆಯಲ್ಲಿ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಹೆಚ್.ಜೆ. ರಮೇಶ್‌, ಹಿರಿಯ ಅಧಿಕಾರಿಗಳು, ಸಚಿವಾಲಯ ನೌಕರರ ಸಂಘದ ಪದಾಧಿಕಾರಿಗಳು, ಇವಿ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

10 mins ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

15 mins ago

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…

37 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

1 hour ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

1 hour ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

2 hours ago