ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರದ ಅರಾಜಕತೆಯ ಆಡಳಿತದಲ್ಲಿ ಸರಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರನ್ನು ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಡಾ.ಜಿ.ಪರಮೇಶ್ವರ್ ಅವರೇ, ನೀವು ಈ ರಾಜ್ಯದ ಗೃಹ ಸಚಿವರು ಎಂಬುದನ್ನು ನಾವು ನೆನಪಿಸಬೇಕೆ?’ ಎಂದು ಪ್ರಶ್ನಿಸಿದೆ.
‘ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ಗೇರ್ ನಲ್ಲಿರಿಸಿರುವ ಕಾಂಗ್ರೆಸ್ ಸರಕಾರದ ಅಸಲಿ ಕರ್ನಾಟಕ ಮಾಡೆಲ್ ಇದು. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಆರಂಭವಾಗಿದ್ದ ಬಹುತೇಕ ಕಾಮಗಾರಿಗಳಿಗೆ ಅನುದಾನ ನೀಡದೆ, ಅರ್ಧದಲ್ಲಿ ನಿಲ್ಲಿಸಿದ್ದೇ ಸಿಎಂ ಸಿದ್ದರಾಮಯ್ಯ ಅವರ ಸರಕಾರದ 5 ತಿಂಗಳ ಸಾಧನೆ. ಅಧರ್ಂಬರ್ಧವಾಗಿರುವ ಕಾಮಗಾರಿಗಳು ಮುಂದಿನ ನಾಲ್ಕುವರೆ ವರ್ಷಗಳಲ್ಲಿ ಮುಗಿದರೆ, ಅದೇ ಕರ್ನಾಟಕ ಜನರ ಪುಣ್ಯ’ ಎಂದು ಬಿಜೆಪಿ ಲೇವಡಿ ಮಾಡಿದೆ.
‘ಬೆಂಗಳೂರಿನ ಬ್ರ್ಯಾಂಡ್ ಹೆಸರಿಗೆ ಧಕ್ಕೆ ತಂದಿದ್ದ ವರ್ತೂರು ಹಾಗೂ ಬೆಳ್ಳಂದೂರು ಕೆರೆಗಳ ಪುನಶ್ಚೇತನ ಕಾಮಗಾರಿಯನ್ನು ಕಾಂಗ್ರೆಸ್ ಸರಕಾರ ಸ್ಥಗಿತಗೊಳಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಬ್ರ್ಯಾಂಡ್ ಬೆಂಗಳೂರಿನ ಹೆಸರಿನಲ್ಲಿ ಪಿಕ್ನಿಕ್ ಮಾಡುವ ನಿಮಗೆ, ಈ ಸಂಗತಿ ತಿಳಿದಿಲ್ಲವೇ ಅಥವಾ ಜಾಣಕುರುಡೇ?’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…