ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರದ ಅರಾಜಕತೆಯ ಆಡಳಿತದಲ್ಲಿ ಸರಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರನ್ನು ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಡಾ.ಜಿ.ಪರಮೇಶ್ವರ್ ಅವರೇ, ನೀವು ಈ ರಾಜ್ಯದ ಗೃಹ ಸಚಿವರು ಎಂಬುದನ್ನು ನಾವು ನೆನಪಿಸಬೇಕೆ?’ ಎಂದು ಪ್ರಶ್ನಿಸಿದೆ.
‘ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ಗೇರ್ ನಲ್ಲಿರಿಸಿರುವ ಕಾಂಗ್ರೆಸ್ ಸರಕಾರದ ಅಸಲಿ ಕರ್ನಾಟಕ ಮಾಡೆಲ್ ಇದು. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಆರಂಭವಾಗಿದ್ದ ಬಹುತೇಕ ಕಾಮಗಾರಿಗಳಿಗೆ ಅನುದಾನ ನೀಡದೆ, ಅರ್ಧದಲ್ಲಿ ನಿಲ್ಲಿಸಿದ್ದೇ ಸಿಎಂ ಸಿದ್ದರಾಮಯ್ಯ ಅವರ ಸರಕಾರದ 5 ತಿಂಗಳ ಸಾಧನೆ. ಅಧರ್ಂಬರ್ಧವಾಗಿರುವ ಕಾಮಗಾರಿಗಳು ಮುಂದಿನ ನಾಲ್ಕುವರೆ ವರ್ಷಗಳಲ್ಲಿ ಮುಗಿದರೆ, ಅದೇ ಕರ್ನಾಟಕ ಜನರ ಪುಣ್ಯ’ ಎಂದು ಬಿಜೆಪಿ ಲೇವಡಿ ಮಾಡಿದೆ.
‘ಬೆಂಗಳೂರಿನ ಬ್ರ್ಯಾಂಡ್ ಹೆಸರಿಗೆ ಧಕ್ಕೆ ತಂದಿದ್ದ ವರ್ತೂರು ಹಾಗೂ ಬೆಳ್ಳಂದೂರು ಕೆರೆಗಳ ಪುನಶ್ಚೇತನ ಕಾಮಗಾರಿಯನ್ನು ಕಾಂಗ್ರೆಸ್ ಸರಕಾರ ಸ್ಥಗಿತಗೊಳಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಬ್ರ್ಯಾಂಡ್ ಬೆಂಗಳೂರಿನ ಹೆಸರಿನಲ್ಲಿ ಪಿಕ್ನಿಕ್ ಮಾಡುವ ನಿಮಗೆ, ಈ ಸಂಗತಿ ತಿಳಿದಿಲ್ಲವೇ ಅಥವಾ ಜಾಣಕುರುಡೇ?’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…