ರಾಜ್ಯ

ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು : ‘ರಾಜ್ಯದ ಕಾಂಗ್ರೆಸ್ ಸರಕಾರದ ಅರಾಜಕತೆಯ ಆಡಳಿತದಲ್ಲಿ ಸರಕಾರಿ ಅಧಿಕಾರಿಗಳಿಗೂ ರಕ್ಷಣೆ ಇಲ್ಲ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ಬೆಂಗಳೂರಿನಲ್ಲಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರನ್ನು ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಡಾ.ಜಿ.ಪರಮೇಶ್ವರ್ ಅವರೇ, ನೀವು ಈ ರಾಜ್ಯದ ಗೃಹ ಸಚಿವರು ಎಂಬುದನ್ನು ನಾವು ನೆನಪಿಸಬೇಕೆ?’ ಎಂದು ಪ್ರಶ್ನಿಸಿದೆ.

‘ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್‍ಗೇರ್ ನಲ್ಲಿರಿಸಿರುವ ಕಾಂಗ್ರೆಸ್ ಸರಕಾರದ ಅಸಲಿ ಕರ್ನಾಟಕ ಮಾಡೆಲ್ ಇದು. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಆರಂಭವಾಗಿದ್ದ ಬಹುತೇಕ ಕಾಮಗಾರಿಗಳಿಗೆ ಅನುದಾನ ನೀಡದೆ, ಅರ್ಧದಲ್ಲಿ ನಿಲ್ಲಿಸಿದ್ದೇ ಸಿಎಂ ಸಿದ್ದರಾಮಯ್ಯ ಅವರ ಸರಕಾರದ 5 ತಿಂಗಳ ಸಾಧನೆ. ಅಧರ್ಂಬರ್ಧವಾಗಿರುವ ಕಾಮಗಾರಿಗಳು ಮುಂದಿನ ನಾಲ್ಕುವರೆ ವರ್ಷಗಳಲ್ಲಿ ಮುಗಿದರೆ, ಅದೇ ಕರ್ನಾಟಕ ಜನರ ಪುಣ್ಯ’ ಎಂದು ಬಿಜೆಪಿ ಲೇವಡಿ ಮಾಡಿದೆ.

‘ಬೆಂಗಳೂರಿನ ಬ್ರ್ಯಾಂಡ್ ಹೆಸರಿಗೆ ಧಕ್ಕೆ ತಂದಿದ್ದ ವರ್ತೂರು ಹಾಗೂ ಬೆಳ್ಳಂದೂರು ಕೆರೆಗಳ ಪುನಶ್ಚೇತನ ಕಾಮಗಾರಿಯನ್ನು ಕಾಂಗ್ರೆಸ್ ಸರಕಾರ ಸ್ಥಗಿತಗೊಳಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಬ್ರ್ಯಾಂಡ್ ಬೆಂಗಳೂರಿನ ಹೆಸರಿನಲ್ಲಿ ಪಿಕ್ನಿಕ್ ಮಾಡುವ ನಿಮಗೆ, ಈ ಸಂಗತಿ ತಿಳಿದಿಲ್ಲವೇ ಅಥವಾ ಜಾಣಕುರುಡೇ?’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

https://x.com/BJP4Karnataka/status/1721073257795801379?s=20

andolanait

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

45 mins ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

1 hour ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

2 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

7 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago