ರಾಜ್ಯ

ಅಧಿಕಾರ ಹಂಚಿಕೆ ಬಗ್ಗೆ ಯಾರೇ ಮಾತನಾಡಿದಿರೂ ಅದು ಪಕ್ಷ ವಿರೋಧಿ ಕೆಲಸ : ಡಿಸಿಎಂ ಡಿಕೆಶಿ

ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ. ಈ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟ ಸಂದೇಶ ರವಾನಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಅಧಿಕಾರ ಹಂಚಿಕೆ ವಿಚಾರವಾಗಿ ಮತ್ತೆ ಚರ್ಚೆ ಆರಂಭವಾಗುತ್ತಿವೆ ಎಂದು ಕೇಳಿದಾಗ, “ಯಾವ ಅಧಿಕಾರ ಹಂಚಿಕೆ ವಿಚಾರ ಇಲ್ಲ. ಈ ಬಗ್ಗೆ ಯಾರಿಗೂ ಮಾತನಾಡುವ ಹಕ್ಕಿಲ್ಲ. ಶಾಸಕ ರಂಗನಾಥ್ ಸೇರಿದಂತೆ ಈ ವಿಚಾರವಾಗಿ ಯಾರೆಲ್ಲಾ ಮಾತನಾಡಿದ್ದಾರೋ ಅವರಿಗೆ ನೋಟೀಸ್ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಅವರಿಗೆ ಸೂಚಿಸಿದ್ದೇನೆ. ಈ ವಿಚಾರವಾಗಿ ಚರ್ಚೆ ಮಾಡಬಾರದು ಎಂದು ಸ್ವತಃ ನಾನೇ ಹೇಳುತ್ತಿದ್ದೇನೆ. ನಿನ್ನೆ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದರೂ ಕೆಲವು ಮಾಧ್ಯಮಗಳು ಬೇರೆ ರೀತಿ ಬರೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೇಳಿರುವ ಮಾತು ಅಂತಿಮ. ಅದರೆ ಮೇಲೆ ಈ ವಿಚಾರವಾಗಿ ಯಾರೂ ಚರ್ಚೆ ಮಾಡುವಂತಿಲ್ಲ” ಎಂದು ತಿಳಿಸಿದರು.

“ಯಾರು ಈ ವಿಚಾರವಾಗಿ ಚರ್ಚೆ ಮಾಡುತ್ತಾರೋ ಅವರು ಪಕ್ಷಕ್ಕೆ ಡ್ಯಾಮೇಜ್ ಮಾಡಿದಂತೆ. ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿದರೂ ಪಕ್ಷಕ್ಕೆ ಹಾನಿ ಮಾಡಿದಂತೆ, ನನ್ನ ಪರವಾಗಿ ಮಾತನಾಡಿದರೂ ಪಕ್ಷಕ್ಕೆ ಹಾನಿ ಮಾಡಿದಂತೆ” ಎಂದು ಕಿಡಿಕಾರಿದರು.

ಇದಕ್ಕೂ ಮುನ್ನ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡಿರುವ ಶಿವರಾಮೇಗೌಡ, ಶಾಸಕ ರಂಗನಾಥ್ ಅವರಿಗೂ ನೋಟೀಸ್ ನೀಡುವಂತೆ ನಿರ್ದೇಶನ ನೀಡಿದ್ದೇನೆ. ಈ ವಿಚಾರದಲ್ಲಿ ಮಾತನಾಡಿದರೆ ಜಿ.ಸಿ ಚಂದ್ರಶೇಖರ್ ಅವರಿಗೂ ನೋಟೀಸ್ ನೀಡುವಂತೆ ಹೇಳಿದ್ದೇನೆ. ನಮ್ಮಲ್ಲಿ ಶಿಸ್ತು ಇಲ್ಲವಾದರೆ ಪಕ್ಷ ಉಳಿಯುವುದಿಲ್ಲ” ಎಂದು ತಿಳಿಸಿದರು.

ಇದನ್ನು ಓದಿ : ಡಿಕೆಶಿ ಸಿಎಂ ಆಗಬಾರದೆಂದು ಕುರುಬರನ್ನು ಒಂದುಗೂಡಿಸುವ ಕೆಲಸ: ಸಿದ್ದು ವಿರುದ್ಧ ಎಚ್.ವಿಶ್ವನಾಥ್‌ ವಾಗ್ದಾಳಿ

ಹೈಕಮಾಂಡ್ ನಿರ್ಧಾರವೇ ಅಂತಿಮವೇ ಎಂದು ಮತ್ತೆ ಕೇಳಿದಾಗ, “ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರಲ್ಲ. ಅವರ ಮಾತೇ ಅಂತಿಮ. ನಮಗೆ ಪಕ್ಷ ಮುಖ್ಯ. ಪಕ್ಷ ಹೇಳಿದಂತೆ ನಡೆಯುವ ಶಿಸ್ತಿನ ಸಿಪಾಯಿಗಳು ನಾವು” ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಫಿಕ್ಸ್ ಆಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ಬಿಜೆಪಿ ಪಕ್ಷದವರು ಅವರ ಪಕ್ಷದಲ್ಲಿನ ಕ್ರಾಂತಿ ಬಗ್ಗೆ ಚರ್ಚೆ ಮಾಡಿಕೊಳ್ಳಲಿ. ಅವರ ಆಂತರಿಕ ಸಮಸ್ಯೆ ಚರ್ಚೆ ಮಾಡಿ ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರಿಗೆ ಅಗತ್ಯ ಸೂಜಿದಾರವನ್ನು ನಾನು ಕಳುಹಿಸಿಕೊಡುತ್ತೇನೆ. ಅವರು ತಮ್ಮ ಪಕ್ಷದ ಹರುಕುಗಳನ್ನು ಹೊಲಿದುಕೊಳ್ಳಲಿ” ಎಂದು ತಿಳಿಸಿದರು.

ಆರ್ ಎಸ್ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಗಣವೇಷಧಾರಿಗಳಾಗಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅವರ ಪಕ್ಷದ ಕಾರ್ಯಕ್ರಮ ಅವರು ಮಾಡಿಕೊಳ್ಳಲಿ. ಆ ವಿಚಾರ ನನಗ್ಯಾಕೆ ಬೇಕು? ನಿಮಗೆ ಅದು ಬೇಕಾಗಿರಬಹುದು, ನಮಗೆ ಅದು ಬೇಡ. ನಮ್ಮ ಆಲೋಚನೆ ದೇಶ, ಸ್ವಾತಂತ್ರ್ಯ ವಿಚಾರ, ಗಾಂಧೀಜಿ ಅವರ ವಿಚಾರಧಾರೆಯಂತೆ ಈಶ್ವರ, ಅಲ್ಲಾ ತೇರೆ ನಾಮ್ ಎಂಬುದನ್ನು ನಾವು ಸ್ಮರಿಸುತ್ತೇವೆ. ಬಿಜೆಪಿಯವರು ಅಲ್ಲಾ ಎಂದು ಮಾತನಾಡುತ್ತಾರಾ? ಗಾಂಧೀಜಿ ಅವರ ಸಂದೇಶವನ್ನು ಬಿಜೆಪಿ ಪಾಲಿಸುತ್ತದೆಯೇ? ನಮ್ಮ ನಾಡಗೀತೆಯಲ್ಲೂ ಹಿಂದೂ, ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ ಎಂಬ ಸಾಲಿದೆ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಲಾಗಿದೆ. ಈ ಎಲ್ಲಾ ವಿಚಾರಧಾರೆಗಳನ್ನು ಸೇರಿಸಿ ಈ ದೇಶದ ಅಡಿಪಾಯ ನಿರ್ಮಾಣದ ಮಾಡಲಾಗಿದೆ. ಇವುಗಳಿಂದ ಬಿಜೆಪಿಯವರು ತಪ್ಪಿಸಿಕೊಳ್ಳಲು ಆಗುವುದಿಲ್ಲ. ಅದರಲ್ಲೇ ಅವರು ಜೀವನ ಮಾಡಬೇಕು” ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

31 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

32 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

35 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

39 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

43 mins ago