ರಾಜ್ಯ

ಅಧಿಕಾರ ಹಂಚಿಕೆ ಬಗ್ಗೆ ಯಾರೇ ಮಾತನಾಡಿದಿರೂ ಅದು ಪಕ್ಷ ವಿರೋಧಿ ಕೆಲಸ : ಡಿಸಿಎಂ ಡಿಕೆಶಿ

ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ. ಈ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟ ಸಂದೇಶ ರವಾನಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಅಧಿಕಾರ ಹಂಚಿಕೆ ವಿಚಾರವಾಗಿ ಮತ್ತೆ ಚರ್ಚೆ ಆರಂಭವಾಗುತ್ತಿವೆ ಎಂದು ಕೇಳಿದಾಗ, “ಯಾವ ಅಧಿಕಾರ ಹಂಚಿಕೆ ವಿಚಾರ ಇಲ್ಲ. ಈ ಬಗ್ಗೆ ಯಾರಿಗೂ ಮಾತನಾಡುವ ಹಕ್ಕಿಲ್ಲ. ಶಾಸಕ ರಂಗನಾಥ್ ಸೇರಿದಂತೆ ಈ ವಿಚಾರವಾಗಿ ಯಾರೆಲ್ಲಾ ಮಾತನಾಡಿದ್ದಾರೋ ಅವರಿಗೆ ನೋಟೀಸ್ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಅವರಿಗೆ ಸೂಚಿಸಿದ್ದೇನೆ. ಈ ವಿಚಾರವಾಗಿ ಚರ್ಚೆ ಮಾಡಬಾರದು ಎಂದು ಸ್ವತಃ ನಾನೇ ಹೇಳುತ್ತಿದ್ದೇನೆ. ನಿನ್ನೆ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದರೂ ಕೆಲವು ಮಾಧ್ಯಮಗಳು ಬೇರೆ ರೀತಿ ಬರೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೇಳಿರುವ ಮಾತು ಅಂತಿಮ. ಅದರೆ ಮೇಲೆ ಈ ವಿಚಾರವಾಗಿ ಯಾರೂ ಚರ್ಚೆ ಮಾಡುವಂತಿಲ್ಲ” ಎಂದು ತಿಳಿಸಿದರು.

“ಯಾರು ಈ ವಿಚಾರವಾಗಿ ಚರ್ಚೆ ಮಾಡುತ್ತಾರೋ ಅವರು ಪಕ್ಷಕ್ಕೆ ಡ್ಯಾಮೇಜ್ ಮಾಡಿದಂತೆ. ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿದರೂ ಪಕ್ಷಕ್ಕೆ ಹಾನಿ ಮಾಡಿದಂತೆ, ನನ್ನ ಪರವಾಗಿ ಮಾತನಾಡಿದರೂ ಪಕ್ಷಕ್ಕೆ ಹಾನಿ ಮಾಡಿದಂತೆ” ಎಂದು ಕಿಡಿಕಾರಿದರು.

ಇದಕ್ಕೂ ಮುನ್ನ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡಿರುವ ಶಿವರಾಮೇಗೌಡ, ಶಾಸಕ ರಂಗನಾಥ್ ಅವರಿಗೂ ನೋಟೀಸ್ ನೀಡುವಂತೆ ನಿರ್ದೇಶನ ನೀಡಿದ್ದೇನೆ. ಈ ವಿಚಾರದಲ್ಲಿ ಮಾತನಾಡಿದರೆ ಜಿ.ಸಿ ಚಂದ್ರಶೇಖರ್ ಅವರಿಗೂ ನೋಟೀಸ್ ನೀಡುವಂತೆ ಹೇಳಿದ್ದೇನೆ. ನಮ್ಮಲ್ಲಿ ಶಿಸ್ತು ಇಲ್ಲವಾದರೆ ಪಕ್ಷ ಉಳಿಯುವುದಿಲ್ಲ” ಎಂದು ತಿಳಿಸಿದರು.

ಇದನ್ನು ಓದಿ : ಡಿಕೆಶಿ ಸಿಎಂ ಆಗಬಾರದೆಂದು ಕುರುಬರನ್ನು ಒಂದುಗೂಡಿಸುವ ಕೆಲಸ: ಸಿದ್ದು ವಿರುದ್ಧ ಎಚ್.ವಿಶ್ವನಾಥ್‌ ವಾಗ್ದಾಳಿ

ಹೈಕಮಾಂಡ್ ನಿರ್ಧಾರವೇ ಅಂತಿಮವೇ ಎಂದು ಮತ್ತೆ ಕೇಳಿದಾಗ, “ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರಲ್ಲ. ಅವರ ಮಾತೇ ಅಂತಿಮ. ನಮಗೆ ಪಕ್ಷ ಮುಖ್ಯ. ಪಕ್ಷ ಹೇಳಿದಂತೆ ನಡೆಯುವ ಶಿಸ್ತಿನ ಸಿಪಾಯಿಗಳು ನಾವು” ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಫಿಕ್ಸ್ ಆಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ಬಿಜೆಪಿ ಪಕ್ಷದವರು ಅವರ ಪಕ್ಷದಲ್ಲಿನ ಕ್ರಾಂತಿ ಬಗ್ಗೆ ಚರ್ಚೆ ಮಾಡಿಕೊಳ್ಳಲಿ. ಅವರ ಆಂತರಿಕ ಸಮಸ್ಯೆ ಚರ್ಚೆ ಮಾಡಿ ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರಿಗೆ ಅಗತ್ಯ ಸೂಜಿದಾರವನ್ನು ನಾನು ಕಳುಹಿಸಿಕೊಡುತ್ತೇನೆ. ಅವರು ತಮ್ಮ ಪಕ್ಷದ ಹರುಕುಗಳನ್ನು ಹೊಲಿದುಕೊಳ್ಳಲಿ” ಎಂದು ತಿಳಿಸಿದರು.

ಆರ್ ಎಸ್ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಗಣವೇಷಧಾರಿಗಳಾಗಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅವರ ಪಕ್ಷದ ಕಾರ್ಯಕ್ರಮ ಅವರು ಮಾಡಿಕೊಳ್ಳಲಿ. ಆ ವಿಚಾರ ನನಗ್ಯಾಕೆ ಬೇಕು? ನಿಮಗೆ ಅದು ಬೇಕಾಗಿರಬಹುದು, ನಮಗೆ ಅದು ಬೇಡ. ನಮ್ಮ ಆಲೋಚನೆ ದೇಶ, ಸ್ವಾತಂತ್ರ್ಯ ವಿಚಾರ, ಗಾಂಧೀಜಿ ಅವರ ವಿಚಾರಧಾರೆಯಂತೆ ಈಶ್ವರ, ಅಲ್ಲಾ ತೇರೆ ನಾಮ್ ಎಂಬುದನ್ನು ನಾವು ಸ್ಮರಿಸುತ್ತೇವೆ. ಬಿಜೆಪಿಯವರು ಅಲ್ಲಾ ಎಂದು ಮಾತನಾಡುತ್ತಾರಾ? ಗಾಂಧೀಜಿ ಅವರ ಸಂದೇಶವನ್ನು ಬಿಜೆಪಿ ಪಾಲಿಸುತ್ತದೆಯೇ? ನಮ್ಮ ನಾಡಗೀತೆಯಲ್ಲೂ ಹಿಂದೂ, ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ ಎಂಬ ಸಾಲಿದೆ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಲಾಗಿದೆ. ಈ ಎಲ್ಲಾ ವಿಚಾರಧಾರೆಗಳನ್ನು ಸೇರಿಸಿ ಈ ದೇಶದ ಅಡಿಪಾಯ ನಿರ್ಮಾಣದ ಮಾಡಲಾಗಿದೆ. ಇವುಗಳಿಂದ ಬಿಜೆಪಿಯವರು ತಪ್ಪಿಸಿಕೊಳ್ಳಲು ಆಗುವುದಿಲ್ಲ. ಅದರಲ್ಲೇ ಅವರು ಜೀವನ ಮಾಡಬೇಕು” ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago