ಬೆಂಗಳೂರು: ಬಿಜೆಪಿಯವರು ತಮ್ಮ ವಿರುದ್ಧ ಹಾರಾಡಿ, ಚೀರಾಡಿ, ಬಟ್ಟೆ ಹರಿದುಕೊಂಡರೂ ತಾವು ತಲೆಕೆಡಿಸಿಕೊಳ್ಳುವುದಿಲ್ಲ ಯಾರಿಗೇ ದೂರು ನೀಡಿದರೂ ಹೆದರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ತಾವು ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇವೆ. ಮನಸ್ಮೃತಿ, ಆರ್ಎಸ್ಎಸ್ ಚಿಂತನೆಗಳಿಗೆ ಎದುರಾಗಿದ್ದೇವೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಇಂತಹುದಕ್ಕೆಲ್ಲಾ ನಾವು ಜಗ್ಗುವುದಿಲ್ಲ. ಎಷ್ಟೇ ಬೆದರಿಕೆ ಹಾಕಿದರೂ ತಮ್ಮ ನಿಲುವುಗಳು ಬದಲಾಗುವುದಿಲ್ಲ ಎಂದರು.
ಮೂರು ಬಾರಿ ಸಚಿವನಾಗಿದ್ದೇನೆ. ಇಷ್ಟು ವರ್ಷ ರಾಜಕೀಯ ಜೀವನದಲ್ಲಿ ಒಂದು ರೂಪಾಯಿ ಭ್ರಷ್ಟಾಚಾರ ಮಾಡಿಲ್ಲ. ನನ್ನ ವಿರುದ್ಧ ಆದಾಯ ತೆರಿಗೆ, ಸಿಬಿಐ, ಜಾರಿ ನಿರ್ದೇಶನಾಲಯ ಸೇರಿದಂತೆ ಯಾವುದೇ ಸಂಸ್ಥೆಗೆ ದೂರು ನೀಡಲಿ. ಅಮಿತ್ ಶಾ, ಪ್ರಧಾನಿ ಮೋದಿಯವರಿಗೂ ಹೇಳಲಿ. ನಾವು ಯಾವುದಕ್ಕೂ ಹೆದರುವುದಿಲ್ಲ. ತಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಎಷ್ಟು ದೃಢವಾಗಿದ್ದರೋ, ನಾನೂ ಕೂಡ ಹಾಗೆಯೇ ಇರುತ್ತೇನೆ ಎಂದು ಹೇಳಿದರು.
ನನ್ನ ಆಪ್ತ ಎಂದು ಹೇಳಿರುವ ವ್ಯಕ್ತಿಯಿಂದ ಕಿರುಕುಳವಾಗಿದೆ ಎಂದು ವ್ಯಕ್ತಿಯೊಬ್ಬ ಆತಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಮುಂದಿಟ್ಟುಕೊಂಡು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಆ ರೀತಿಯ ಘಟನೆ ಆಗಿರಬಹುದು. ನಾನು ಇಲ್ಲ ಎಂದು ಹೇಳುತ್ತಿಲ್ಲ. ಇದರ ತನಿಖೆಗೂ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ತನಿಖೆಯಾಗಲಿ ಎಂದೇ ನಾನು ಹೇಳುತ್ತಿದ್ದೇನೆ. ಆದರೂ ನನ್ನ ವಿರುದ್ಧ ಅನಗತ್ಯವಾಗಿ ಟೀಕೆ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಾರ್ಕಿಕತೆ ಇಲ್ಲದೆ ಮಾತನಾಡುತ್ತಿದ್ದಾರೆ. ಕಲಬುರಗಿ ರಿಪಬ್ಲಿಕ್ ಎಂದು ದೂರಿದ್ದಾರೆ. ಕಲಬುರಗಿಯಲ್ಲಿ ಐಪಿಎಲ್ ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಶಾಸಕ ಯಾವ ಪಕ್ಷದವರು?, ಪಡಿತರ ಅಕ್ಕಿ, ಮಕ್ಕಳ ಹಾಲು ಕದ್ದು 20ಕ್ಕೂ ಹೆಚ್ಚು ಪ್ರಕರಣಗಳಿಗೆ ಗುರಿಯಾಗಿರುವವರು ಯಾರು?, ಕಲಬುರಗಿಯಲ್ಲಿ ಹೆಚ್ಚು ಅಪರಾಧಗಳನ್ನು ಮಾಡಿದವರು ಯಾರು? ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಸವಾಲು ಹಾಕಿದರು.
ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪ್ರಯೋಗಾಲಯದ ವರದಿ ಬಂದಿದೆ. ಅದರ ಬಗ್ಗೆ ವಿಜಯೇಂದ್ರ ಏಕೆ ಮಾತನಾಡುತ್ತಿಲ್ಲ. ಮುನಿರತ್ನ, ಸಿ.ಟಿ.ರವಿ ಅವರ ಪ್ರಕರಣಗಳ ಬಗ್ಗೆ ಹಾಗೂ ಕೋವಿಡ್ ಹಗರಣದ ಬಗ್ಗೆ ಏಕೆ ಸತ್ಯಶೋಧನೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಅನ್ವರ್ ಮಾನ್ಪಡಿಗೆ 150 ಕೋಟಿ ರೂ. ನೀಡಲು ಆಮಿಷವೊಡ್ಡಿದ ಪ್ರಕರಣದ ಬಗ್ಗೆ ಉಸಿರೆತ್ತುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯವರು ಹೇಳಿದ್ದೆಲ್ಲಾ ಸತ್ಯವಲ್ಲ. ನನ್ನ ರಾಜೀನಾಮೆ ಕೇಳುವ ಮೊದಲು ದಾಖಲೆ ಕೊಡಿ ಎಂದು ಒತ್ತಾಯಿಸಿದರು.
ಸಂತೋಷ್ ಪಾಟೀಲ್ ಆತಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರ ಹೆಸರನ್ನು ಸ್ಪಷ್ಟವಾಗಿ ನಮೂದಿಸಲಾಗಿತ್ತು. ಈಗ ಬಿಜೆಪಿಯವರು ಆರೋಪ ಮಾಡುತ್ತಿರುವ ಪ್ರಕರಣದಲ್ಲಿ ನನ್ನ ಹೆಸರಿಲ್ಲ. ಗುತ್ತಿಗೆ ವ್ಯವಹಾರಕ್ಕೆ ಸಂಬಂಧಪಟ್ಟಂತೆ ನಾನಾ ರೀತಿಯ ಹೇಳಿಕೆಗಳು, ಗೊಂದಲಗಳಿವೆ. ಅದರ ಬಗ್ಗೆ ತನಿಖೆಯಾಗಬೇಕು ಎಂದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…