ರಾಜ್ಯ

ಚೀರಾಡಿ, ಬಟ್ಟೆ ಹರಿದುಕೊಂಡ್ರೂ ತಲೆಕೆಡಿಸ್ಕೊಳ್ಳಲ್ಲ: ಬಿಜೆಪಿಗೆ ಪ್ರಿಯಾಂಕ್‌ ಖರ್ಗೆ ಟಾಂಗ್‌

ಬೆಂಗಳೂರು:  ಬಿಜೆಪಿಯವರು ತಮ್ಮ ವಿರುದ್ಧ ಹಾರಾಡಿ, ಚೀರಾಡಿ, ಬಟ್ಟೆ ಹರಿದುಕೊಂಡರೂ ತಾವು ತಲೆಕೆಡಿಸಿಕೊಳ್ಳುವುದಿಲ್ಲ ಯಾರಿಗೇ ದೂರು ನೀಡಿದರೂ ಹೆದರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ತಾವು ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇವೆ. ಮನಸ್ಮೃತಿ, ಆರ್‌ಎಸ್‌‍ಎಸ್‌‍ ಚಿಂತನೆಗಳಿಗೆ ಎದುರಾಗಿದ್ದೇವೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಇಂತಹುದಕ್ಕೆಲ್ಲಾ ನಾವು ಜಗ್ಗುವುದಿಲ್ಲ. ಎಷ್ಟೇ ಬೆದರಿಕೆ ಹಾಕಿದರೂ ತಮ್ಮ ನಿಲುವುಗಳು ಬದಲಾಗುವುದಿಲ್ಲ ಎಂದರು.

ಮೂರು ಬಾರಿ ಸಚಿವನಾಗಿದ್ದೇನೆ. ಇಷ್ಟು ವರ್ಷ ರಾಜಕೀಯ ಜೀವನದಲ್ಲಿ ಒಂದು ರೂಪಾಯಿ ಭ್ರಷ್ಟಾಚಾರ ಮಾಡಿಲ್ಲ. ನನ್ನ ವಿರುದ್ಧ ಆದಾಯ ತೆರಿಗೆ, ಸಿಬಿಐ, ಜಾರಿ ನಿರ್ದೇಶನಾಲಯ ಸೇರಿದಂತೆ ಯಾವುದೇ ಸಂಸ್ಥೆಗೆ ದೂರು ನೀಡಲಿ. ಅಮಿತ್‌ ಶಾ, ಪ್ರಧಾನಿ ಮೋದಿಯವರಿಗೂ ಹೇಳಲಿ. ನಾವು ಯಾವುದಕ್ಕೂ ಹೆದರುವುದಿಲ್ಲ. ತಮ್ಮ ತಂದೆ ಮಲ್ಲಿಕಾರ್ಜುನ ಖರ್ಗೆ ಎಷ್ಟು ದೃಢವಾಗಿದ್ದರೋ, ನಾನೂ ಕೂಡ ಹಾಗೆಯೇ ಇರುತ್ತೇನೆ ಎಂದು ಹೇಳಿದರು.

ನನ್ನ ಆಪ್ತ ಎಂದು ಹೇಳಿರುವ ವ್ಯಕ್ತಿಯಿಂದ ಕಿರುಕುಳವಾಗಿದೆ ಎಂದು ವ್ಯಕ್ತಿಯೊಬ್ಬ ಆತಹತ್ಯೆ ಮಾಡಿಕೊಂಡಿರುವ ಪ್ರಕರಣವನ್ನು ಮುಂದಿಟ್ಟುಕೊಂಡು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಆ ರೀತಿಯ ಘಟನೆ ಆಗಿರಬಹುದು. ನಾನು ಇಲ್ಲ ಎಂದು ಹೇಳುತ್ತಿಲ್ಲ. ಇದರ ತನಿಖೆಗೂ ನಾನು ವಿರೋಧ ವ್ಯಕ್ತಪಡಿಸುತ್ತಿಲ್ಲ. ತನಿಖೆಯಾಗಲಿ ಎಂದೇ ನಾನು ಹೇಳುತ್ತಿದ್ದೇನೆ. ಆದರೂ ನನ್ನ ವಿರುದ್ಧ ಅನಗತ್ಯವಾಗಿ ಟೀಕೆ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಾರ್ಕಿಕತೆ ಇಲ್ಲದೆ ಮಾತನಾಡುತ್ತಿದ್ದಾರೆ. ಕಲಬುರಗಿ ರಿಪಬ್ಲಿಕ್‌ ಎಂದು ದೂರಿದ್ದಾರೆ. ಕಲಬುರಗಿಯಲ್ಲಿ ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿರುವ ಶಾಸಕ ಯಾವ ಪಕ್ಷದವರು?, ಪಡಿತರ ಅಕ್ಕಿ, ಮಕ್ಕಳ ಹಾಲು ಕದ್ದು 20ಕ್ಕೂ ಹೆಚ್ಚು ಪ್ರಕರಣಗಳಿಗೆ ಗುರಿಯಾಗಿರುವವರು ಯಾರು?, ಕಲಬುರಗಿಯಲ್ಲಿ ಹೆಚ್ಚು ಅಪರಾಧಗಳನ್ನು ಮಾಡಿದವರು ಯಾರು? ಎಂಬುದಕ್ಕೆ ಮೊದಲು ಉತ್ತರ ನೀಡಲಿ ಎಂದು ಸವಾಲು ಹಾಕಿದರು.

ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪ್ರಯೋಗಾಲಯದ ವರದಿ ಬಂದಿದೆ. ಅದರ ಬಗ್ಗೆ ವಿಜಯೇಂದ್ರ ಏಕೆ ಮಾತನಾಡುತ್ತಿಲ್ಲ. ಮುನಿರತ್ನ, ಸಿ.ಟಿ.ರವಿ ಅವರ ಪ್ರಕರಣಗಳ ಬಗ್ಗೆ ಹಾಗೂ ಕೋವಿಡ್‌ ಹಗರಣದ ಬಗ್ಗೆ ಏಕೆ ಸತ್ಯಶೋಧನೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಅನ್ವರ್‌ ಮಾನ್ಪಡಿಗೆ 150 ಕೋಟಿ ರೂ. ನೀಡಲು ಆಮಿಷವೊಡ್ಡಿದ ಪ್ರಕರಣದ ಬಗ್ಗೆ ಉಸಿರೆತ್ತುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯವರು ಹೇಳಿದ್ದೆಲ್ಲಾ ಸತ್ಯವಲ್ಲ. ನನ್ನ ರಾಜೀನಾಮೆ ಕೇಳುವ ಮೊದಲು ದಾಖಲೆ ಕೊಡಿ ಎಂದು ಒತ್ತಾಯಿಸಿದರು.

ಸಂತೋಷ್‌ ಪಾಟೀಲ್‌ ಆತಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರ ಹೆಸರನ್ನು ಸ್ಪಷ್ಟವಾಗಿ ನಮೂದಿಸಲಾಗಿತ್ತು. ಈಗ ಬಿಜೆಪಿಯವರು ಆರೋಪ ಮಾಡುತ್ತಿರುವ ಪ್ರಕರಣದಲ್ಲಿ ನನ್ನ ಹೆಸರಿಲ್ಲ. ಗುತ್ತಿಗೆ ವ್ಯವಹಾರಕ್ಕೆ ಸಂಬಂಧಪಟ್ಟಂತೆ ನಾನಾ ರೀತಿಯ ಹೇಳಿಕೆಗಳು, ಗೊಂದಲಗಳಿವೆ. ಅದರ ಬಗ್ಗೆ ತನಿಖೆಯಾಗಬೇಕು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

21 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago