lakshmi habbalkar
ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಗಸ್ಟ್ ತಿಂಗಳವರೆಗೆ 1.24 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಜಮಾ ಮಾಡಲಾಗಿದೆ. ಮೊದಲು ಇಲಾಖೆಯಿಂದ ನೇರವಾಗಿ ಹಣ ಹಾಕಲಾಗುತ್ತಿತ್ತು. ನಂತರದಲ್ಲಿ ತಾಲೂಕು ಪಂಚಾಯತ್ ಮೂಲಕ ಹಣ ಹಾಕಲಾಗುತ್ತಿದೆ. ಹಾಗಾಗಿ ಮಧ್ಯದಲ್ಲಿ ಸ್ವಲ್ಪ ಮಟ್ಟಿಗೆ ವಿಳಂಬವಾಗಿದ್ದು ನಿಜ, ಆದರೆ ಒಂದೇ ಒಂದು ರೂಪಾಯಿ ಆಚೆ ಈಚೆ ಆಗದಂತೆ ಮಹಿಳೆಯರಿಗೆ ತಲುಪಿಸಲಾಗುತ್ತಿದೆ. ಸ್ಪಷ್ಟತೆ ಮತ್ತು ಬದ್ಧತೆಯಿಂದ ಯೋಜನೆ ಮುಂದುವರಿಸಲಾಗುತ್ತಿದೆ ಎಂದು ಸಚಿವರು ಸ್ಪಷ್ಟ ಪಡಿಸಿದರು.
ಇದನ್ನು ಓದಿ: ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್
ಆರಂಭದಲ್ಲಿ ಯೋಜನೆಯನ್ನು ನಿಲ್ಲಿಸಲು ಹೇಳಿದವರು ನೀವು, ಯೋಜನೆ ಕುರಿತು ಹಾದಿ ಬೀದಿಯಲ್ಲಿ ಟೀಕೆ ಮಾಡುತ್ತಿದ್ದ ಬಿಜೆಪಿಯವರಿಗೆ ಈಗ ಏಕಾಏಕಿ ಕಾಳಜಿ, ಪ್ರೀತಿ ಬಂತಾ ಎಂದು ಪ್ರಶ್ನಿಸಿದ ಸಚಿವರು, ನಮ್ಮದೇ ಯೋಜನೆ ಕಾಪಿ ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಲಾಡ್ಲಿ ಬೆಹೆನ್ ಯೋಜನೆ ಕಥೆ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. ಬೇರೆ ರಾಜ್ಯದ ಬಗ್ಗೆ ಮಾತಾನಾಡಬಾರದು ಎಂದು ಸುಮ್ಮನಿದ್ದೆ. ನಾವು ಒಂದೇ ಒಂದು ಅಪಾದನೆ ಬರದಂತೆ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…